ಬೆಳ್ಳಂಬೆಳಗ್ಗೆ ಈಶ್ವರಪ್ಪಗೆ ಮೋದಿ ಕರೆ, ಚುನಾವಣೆ ಬಗ್ಗೆ ಚರ್ಚೆ!

Apr 21, 2023, 12:29 PM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದರು.ಈ ವೇಳೆ   ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಹೇಳಿದ್ದಾರೆ. ಇನ್ನು ಕರೆಯಲ್ಲಿ  ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು,  ಶಿವಮೊಗ್ಗದಲ್ಲಿ ಬಿಜೆಪಿ  ಗೆಲ್ಲುವುದಾಗಿ ಭರವಸೆ ನೀಡಿದ್ದಾರೆ. ಈ ಮೊಬೈಲ್ ಸಂಭಾಷಣೆಯಿಂದ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಹಿರಿಯರೊಂದಿಗೆ  ಹಾಗೂ  ಸಾಮಾನ್ಯ ಕಾರ್ಯಕರ್ತರ ಪರವಾಗಿ ಸದಾ ಇರುತ್ತಾರೆ  ಎಂಬುದಕ್ಕೆ  ಸಾಕ್ಷಿಯಾಗಿದೆ.