ಒಕ್ಕಲಿಗರ ಕೋಟೆಯಲ್ಲಿ ಕಮಲ ಅರಳಿಸಲು ತಂತ್ರ, ಕರುನಾಡಲ್ಲಿಂದು ಯುಪಿ ಸಿಎಂ ಪ್ರಚಾರ..!

Apr 26, 2023, 9:25 AM IST

ಕೇಂದ್ರ ಸಚಿವ ಅಮಿತ್ ಶಾ ನಂತರ ಇಂದು ರಾಜ್ಯಕ್ಕೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಆಗಮಿಸುತ್ತಿದ್ದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕಣ್ಣಿಟ್ಟಿದೆ.  ಮಂಡ್ಯಕ್ಕೆ ಪ್ರಧಾನಿ ಮೋದಿ , ಅಮಿತ್ ಶಾ ಭೇಟಿ ನೀಡಿ ಪ್ರಚಾರ ನಡೆಸಿದ್ದು,ಇದೀಗ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ. ಮಂಡ್ಯ ಬಳಿಕ ನೇರವಾಗಿ ವಿಜಯಪುರಕ್ಕೆ  ತೆರಳಲಿದ್ದಾರೆ. ಇನ್ನು ಲಖನೌನಿಂದ ಮೈಸೂರಿಗೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್​​ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಬಸವೇಶ್ವರರ ದರ್ಶನ ಪಡೆದು ನಂತರ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್​​.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.