ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more