ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more