ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more