ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more