ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more