ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

ಕಾಂಗ್ರೆಸ್‌ನಿಂದ ನಾರಿ ಶಕ್ತಿ ಪ್ರದರ್ಶನ, ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ

Published : Jan 16, 2023, 11:07 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ನಾರಿ ಶಕ್ತಿ ಪ್ರದರ್ಶನ ಮಾಡಿದೆ. ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣಾ ಕಹಳೆ ಊದಿದ್ದು ಮಹಿಳಾ ಮತದಾರರ ಮೇಲೆ ಕಣ್ಣಿಟ್ಟು ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಾ ನಾಯಕಿ ಸಮಾವೇಶವನ್ನು ಮಾಡಿದೆ.
 

ಬೆಂಗಳೂರು (ಜ.16): ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ 'ನಾ ನಾಯಕಿ' ಎನ್ನುವ ಹೆಸರಲ್ಲಿ ಸಮಾವೇಶ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾತನಾಡಿದರು. ಏರ್‌ಪೋರ್ಟ್‌ನಲ್ಲಿ ಪ್ರಿಯಾಂಕಾ ವಾದ್ರಾಗೆ ಅದ್ದೂರಿಯಾಗಿ ಸ್ವಾಗತ ನೀಡಲಾಗಿತ್ತು. ಸೇಬಿನ ಹಾರ ಮತ್ತು ಪೂರ್ಣಕುಂಭ ಮೂಲಕ ಸ್ವಾಗತಿಸಲಾಗಿತ್ತು. 

ಇನ್ನು ಸಮಾರಂಭದ ವೇದಿಕೆಯ ಮೇಲೆ ನಾಯಕಿಯರಿಗಷ್ಟೇ ಕೂರಲು ಆಸನ ನೀಡಲಾಗಿತ್ತು. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಸೇರಿ ಪ್ರಮುಖರಿಗೆ ವೇದಿಕೆ ಮುಂಭಾಗ ಆಸನ ನೀಡಲಾಗಿತ್ತು. ಪ್ರಿಯಾಂಕಾಗೆ ಲಂಬಾಣಿ ಸಮುದಾಯದ ಹಾರ ಹಾಕಿ ಸ್ವಾಗತ ನೀಡಲಾಗಿತ್ತು.

ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮ: ಪ್ರಿಯಾಂಕಾ ಗಾಂಧಿ ಆಕರ್ಷಕ ಫೋಟೋ ವೈರಲ್‌

ಇನ್ನು ವೇದಿಕೆಯಲ್ಲಿ ಮಾರ್ಗರೇಟ್ ಆಳ್ವಾ,ಉಮಾಶ್ರೀ, ರಾಣಿಸತೀಶ್, ಜಲಜಾನಾಯಕ್, ಮೋಟಮ್ಮ, ಕುಸಮಾ ಶಿವಳ್ಳಿ, ಹೆಬ್ಬಾಳ್ಕರ್, ನಿಂಬಾಳ್ಕರ್, ರೂಪಾ ಶಶಿಧರ್, ಖನಿಜಾ ಫಾತಿಮಾ ಸೇರಿ ಹಲವರು ಭಾಗಿಯಾಗಿದ್ದರು. 'ಪ್ರಿಯಾಂಕಾ ವಾದ್ರಾ ಬರ್ತಾರೆ ಅಂತಾ ಬಿಜೆಪಿಯಿಂದ ಜಾಹೀರಾತು ನೀಡಲಾಗಿದೆ.  ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಸಹ ಮಹಿಳೆಯರಿಗೆ ನೀಡಿಲ್ಲ. ನಾವು 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರವೂ ಬರೀ ಭರವಸೆಗಳನ್ನ ಮಾತ್ರ ನೀಡಿದೆ ಅಷ್ಟೇ. ಮಹಿಳೆಯರಿಗೆ  ಉದ್ಯೋಗದಲ್ಲಿ 30% ಇತ್ತು ನಾವು ಶೇ.33ಕ್ಕೆ ತಂದಿದ್ದೇವೆ' ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more