ಸಿದ್ದರಾಮಯ್ಯರ ಲಿಂಗಾಯತ ಹೇಳಿಕೆ ತಿರುಚಲಾಗಿದೆ-ಲಕ್ಷ್ಮಣ್‌ ಸವದಿ

Apr 24, 2023, 5:31 PM IST

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿಕೆಯನ್ನು ತಿರುಚಿ ಬಿಜೆಪಿ ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅದನ್ನು ತಪ್ಪಾಗಿ ಅರ್ಥೈಸುವ ಕೆಲಸವಾಗಿದೆ. ಈ ಮೂಲಕ ಜನರನ್ನು ಪ್ರಚೋಧಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.ಹಾಗೇ  ಗೋಕಾಕ್‌ನಲ್ಲಿ ಈ ಬಾರಿ ಮೌನ ಕ್ರಾಂತಿ ಆಗುತ್ತೆ, ಮೌನ ಕ್ರಾಂತಿಯ ಮೂಲಕ ಹೊಸ ಕಾಂತ್ರಿ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.