ಭವಾನಿಗೆ ಟಿಕೆಟ್ ಕೊಡಿಸಲು ಒಂದಾಯ್ತಾ ರೇವಣ್ಣ ಕುಟುಂಬ?

ಭವಾನಿಗೆ ಟಿಕೆಟ್ ಕೊಡಿಸಲು ಒಂದಾಯ್ತಾ ರೇವಣ್ಣ ಕುಟುಂಬ?

Published : Jan 28, 2023, 11:06 PM IST

ದಿನದಿಂದ ದಿನಕ್ಕೆ ಜೆಡಿಎಸ್‌ ಪಾಲಿಗೆ ಹಾಸನ ಟಿಕೆಟ್‌ ಕಗ್ಗಂಟಾಗುತ್ತಿದೆ. ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರೆ, ಎಚ್‌ಡಿ ಕುಮಾರಸ್ವಾಮಿ ಮಾತ್ರ ಹಾಸನದಲ್ಲಿ ಭವಾನಿ ಚುನಾವಣೆಗೆ ನಿಲ್ಲುವ ಅನಿವಾರ್ಯತೆಯಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಕುಟುಂಬ ಒಂದಾಗಿರುವಂತೆ ಕಾಣುತ್ತಿದೆ.


ಬೆಂಗಳೂರು (ಜೆ.28): ಒಂದೆಡೆ ಎಚ್‌ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆಯ ಮೂಲಕ ಉತ್ತರ ಕರ್ನಾಟಕದ ಉರಿಬಿಸಿಲಲ್ಲಿ ನಿಂತು ಮುಂಬರುವ ಚುನಾವಣೆಯಲ್ಲಿ ಪ್ರಬಲ ಕಿಂಗ್‌ಮೇಕರ್‌ ಆಗುವ ಗುರಿಯಲ್ಲಿದ್ದರೆ, ಇನ್ನೊಂದೆಡೆ ಅವರ ಕುಟುಂಬದಲ್ಲೇ ಟಿಕೆಟ್‌ ಫೈಟ್‌ ಆರಂಭವಾಗಿದೆ. 

ಹಾಸನದಿಂದ ಸ್ವರೂಪ್‌ ಅವರಿಗೆ ಟಿಕೆಟ್‌ ನೀಡಬೇಕು ಎನ್ನುವುದು ಹೆಚ್‌ಡಿ ಕುಮಾರಸ್ವಾಮಿ ಆಸೆಯಾಗಿದ್ದರೆ, ಇನ್ನೊಂದೆಡೆ ಭವಾನಿ ರೇವಣ್ಣ ಹಾಸನದಿಂದ ತಾವೇ ಮುಂದಿನ ಅಭ್ಯರ್ಥಿ ಎಂದು ಹೇಳಿದ್ದಾರೆ. ಈ ನಡುವೆ ಭವಾನಿಗೆ ಟಿಕೆಟ್‌ ಕೊಡಿಸಲು ಇಡೀ ರೇವಣ್ಣ ಕುಟುಂಬವೇ ಒಂದಾಗಿರುವಂತೆ ಕಾಣುತ್ತಿದೆ. ಅಮ್ಮನ ಪರವಾಗಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಎಂಎಲ್‌ಸಿ ಸೂರಜ್‌ ರೇವಣ್ಣ ಬ್ಯಾಟಿಂಗ್‌ ಮಾಡಿದ್ದಾರೆ.

Assembly election: ಹಾಸನಕ್ಕೆ ಭವಾನಿ ರೇವಣ್ಣ ಅವರೇ ಸೂಕ್ತ- ಗೆದ್ದೇ ಗೆಲ್ತಾರೆ: ಸಂಸದ ಪ್ರಜ್ವಲ್‌ ರೇವಣ್ಣ

ಭವಾನಿಗೆ ಟಿಕೆಟ್‌ ಇಲ್ಲ ಎಂದಿದ್ದ ಕುಮಾರಸ್ವಾಮಿಗೆ ಟಾಂಗ್‌ ನೀಡಿರುವ ಸೂರಜ್‌, ಹಾಸನದಲ್ಲಿ ಟಿಕೆಟ್‌ ನಿರ್ಧಾರ ಮಾಡುವುದು ಎಚ್‌ಡಿ ದೇವೇಗೌಡ ಹಾಗೂ ರೇವಣ್ಣ ಎಂದು ಹೇಳಿದ್ದಾರೆ. ಜನಸಾಮಾನ್ಯರನ್ನ, ಕಾರ್ಯಕರ್ತರನ್ನ ನಿಲ್ಲಿಸ್ತೀನಿ ಅನ್ನೋದನ್ನು ಬಿಟ್ಟುಬಿಡಿ ಎಂದು ಸೂರಜ್‌ ಖಡಕ್‌ ಆಗಿ ಹೇಳಿದ್ದಾರೆ. ಇದರ ನಡುವೆ ಭವಾನಿ ರೇವಣ್ಣ ಟೆಂಪಲ್‌ ರನ್‌ ಮುಂದುವರಿಸಿದ್ದಾರೆ.  ರೇವಣ್ಣ ಜತೆ ಹರದೂರು ರಂಗನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಇಡೀ ಕುಟುಂಬ ಕೂಡ ಭಾಗಿಯಾಗಿತ್ತು. 

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more