News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

News Hour: ಬಿಜೆಪಿ ಪಾಲಿಗೆ ಸವಾಲಿನ ಕ್ಷೇತ್ರವಾದ ಅಥಣಿ, ಹುಬ್ಬಳ್ಳಿ ಸೆಂಟ್ರಲ್‌!

Published : Apr 26, 2023, 11:58 PM IST

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಥಣಿ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ನಿಗದಿ ಮಾಡಿದೆ. ಅದೇನೇ ಆದರೂ ಈ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದೆ.

ಬೆಂಗಳೂರು (ಏ.26): ಬಿಜೆಪಿ ಪಾಲಿಗೆ ಉಳಿದೆಲ್ಲಾ ಕ್ಷೇತ್ರಗಳು ಒಂದು ಕಡೆಯಾದರೆ, ಅಥಣಿ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರ ಇನ್ನೊಂದು ಸವಾಲು ಎನ್ನುವಂತಾಗಿದೆ. ಶತಾಯಗತಾಯ ಈ ಎರಡೂ ಕ್ಷೇತ್ರಗಳಲ್ಲಿ ಲಕ್ಷ್ಮಣ ಸವದಿ ಹಾಗೂ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲೇಬೇಕು ಎನ್ನುವ ನಿಟ್ಟಿನಲ್ಲಿ ಪಣತೊಟ್ಟಿದೆ. ಇನ್ನೊಂದೆಡೆ ಬಿಜೆಪಿ ವಿರುದ್ಧ ಜಗದೀಶ್‌ ಶೆಟ್ಟರ್‌ ಸಿಡಿಮಿಡಿಯಾಗಿದ್ದಾರೆ. ಒಡೆದು ಆಳುವ ನೀತಿಯೇ ಬಿಜೆಪಿಯ ಅಜೆಂಡಾ ಎಂದು ಟೀಕೆ ಮಾಡಿದ್ದಾರೆ. ಕ್ಷಣದಲ್ಲಿಯೇ ಇಷ್ಟು ವರ್ಷದ ರಾಜಕಾರಣವನ್ನು ಹೊಸಕಿ ಹಾಕಿದ್ರೆ ಸುಮ್ಮನಿರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

Party Rounds: ಹುಬ್ಬಳ್ಳಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ, ಬದಲಾಯ್ತು ಕಾಂಗ್ರೆಸ್‌ ರಣತಂತ್ರ!

ಇನ್ನು ಪ್ರಚಾರದ ವಿಚಾರಕ್ಕೆ ಬರೋದಾದರೆ, ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬುಧವಾರ ಕರ್ನಾಟಕದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಜೆಡಿಎಸ್‌ನ ಭದ್ರಕೋಟೆ ಮಂಡ್ಯದಿಂದ ತಮ್ಮ ಪ್ರಚಾರ ಕಾರ್ಯವನ್ನು ಅವರು ಆರಂಭ ಮಾಡಿದರು. ಮಂಡ್ಯ ಬಿಜೆಪಿ ಕಡೆಯಿಂದ ಕಾಲಭೈರವನ ಕಂಚಿನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಲಾಯಿತು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more