Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Ground Report:ದಕ್ಷಿಣ ಕನ್ನಡದ 'ಕೇಸರಿ' ಕೋಟೆಯಲ್ಲಿ ಈ ಬಾರಿ 'ಕೈ ಪಡೆ' ಪೈಪೋಟಿ

Published : Dec 04, 2022, 05:43 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ದಕ್ಷಿಣ ಕನ್ನಡ   ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕೋಟೆಯಲ್ಲಿ ಈ ಬಾರಿ ಕೈ ಪಡೆ  ಪೈಪೋಟಿ ನಡೆಸಿದೆ. ಜಿಲ್ಲೆಯಲ್ಲಿ ಟಿಕೆಟ್‌'ಗಾಗಿ ಹೊಸ ಮುಖಗಳ ಪ್ರಯತ್ನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಾಬಲ್ಯವಿದೆ. ಬಿಜೆಪಿಯಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸುವುದೇ ಬಹುತೇಕ ಖಚಿತವಾಗಿದೆ‌. ಕೆಲಕಡೆಗಳಲ್ಲಿ ಜಾತಿವಾರು ಟಿಕೆಟ್‌ ಹಂಚಿಕೆ ನಡೆದರೂ, ಗೆಲುವಿಗೆ ಹಿಂದೂತ್ವವೇ ಮಾನದಂಡ. ಸುಳ್ಯದಲ್ಲಿ ಅಂಗಾರ ಸ್ಪರ್ಧೆ ಕುತೂಹಲ ಮೂಡಿಸಿದ್ದು, ಈಗಾಗಲೇ ಆರು ಬಾರಿ ಸುಳ್ಯದಿಂದ ಅಂಗಾರ ಗೆದ್ದಿದ್ದಾರೆ. ಇನ್ನು ಪುತ್ತೂರಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಬದಲು.   ಪುತ್ತೂರಿನಲ್ಲಿ 1994ರಿಂದ ಬಿಜೆಪಿಯದ್ದೇ ಅಧಿಪತ್ಯ. ಬಿಜೆಪಿ ಶಾಸಕ ಸಂಜೀವ್‌ ಮಠಂದೂರು, ಕಾಂಗ್ರೆಸ್‌'ನಿಂದ ಶಕುಂತಲಾ ಶೆಟ್ಟಿಗೆ  ಟಿಕೆಟ್‌ ನೀಡುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನಲ್ಲಿ  ಹರಿಪ್ರಸಾದ್‌ ಸಂಬಂಧಿ ರೇಸ್‌'ನಲ್ಲಿದ್ದು, ಬಿಜೆಪಿಯಿಂದ ಹರಿಶ್‌ ಪೂಂಜಾಗೆ ಟಿಕೆಟ್ ಪಕ್ಕ. ಇನ್ನು ಬಂಟದವಾಳದಲ್ಲಿ ಜಿದ್ದಾಜಿದ್ದಿ ಪೈಪೋಟಿ ನೀರಿಕ್ಷೆ ಇದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more