Ground Report : ದಾವಣಗೆರೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನೇರ ಫೈಟ್: ಟಿಕೆಟ್ ಕಸರತ್ತು ಜೋರು

Ground Report : ದಾವಣಗೆರೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನೇರ ಫೈಟ್: ಟಿಕೆಟ್ ಕಸರತ್ತು ಜೋರು

Published : Dec 12, 2022, 05:48 PM IST

ವೀರಶೈವ ಲಿಂಗಾಯತರ ಪ್ರಾಬಲ್ಯದ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಾಂಪ್ರದಾಯಿಕ ಎದುರಾಳಿಗಳು. ಜಿಲ್ಲೆಯಲ್ಲಿ ಟಿಕೆಟ್ ಫೈಟ್ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
 

ದಾವಣಗೆರೆ; ದಾವಣಗೆರೆ ಉತ್ತರ ಕಾಂಗ್ರೆಸ್'ನ ಎಸ್‌.ಎಸ್‌ ಮಲ್ಲಿಕಾರ್ಜುನ ಹಾಗೂ ಬಿಜೆಪಿಯ ಎಸ್‌.ಎ ರವೀಂದ್ರನಾಥ್‌ ಅಖಾಡವಾಗಿದೆ. ಆದರೆ 77ರ ಗಡಿ ದಾಟಿದ ರವೀಂದ್ರನಾಥ ಸ್ಪರ್ಧಿಸುತ್ತಾರೋ, ಇಲ್ಲವೋ ಎಂಬ ಗೊಂದಲವಿದೆ. ಸಂಸದ ಸಿದ್ದೇಶ್ವರ್ ರಾಜ್ಯ ರಾಜಕಾರಣದ ಬಗ್ಗೆ ಒಲವು ತೋರುತ್ತಿದ್ದಾರೆ.  ಕಾಂಗ್ರೆಸ್‌ನ ಮಲ್ಲಿಕಾರ್ಜುನ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿಲ್ಲ. ಪಕ್ಷದ ಸೂಚನೆಯಂತೆ 2 ಲಕ್ಷ ರೂ. ಡಿಡಿ ಕಟ್ಟಿಲ್ಲ. ನಾನು ಅರ್ಜಿ ಸಲ್ಲಿಸುತ್ತೇನೆ. ಆದರೆ, 2 ಲಕ್ಷ ಕೊಡಲ್ಲ ಅನ್ನೋ ಮೂಲಕ ತಮ್ಮ ಟಿಕೆಟ್‌ ಪಕ್ಕಾ ಎಂಬ ಸಂದೇಶ ಸಾರಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿಯಿಂದ ಯಶವಂತರಾವ್ ಸೇರಿ ಅನೇಕರು ಟಿಕೆಟ್ ಆಕಾಂಕ್ಷಿಗಳು, ಜೆಡಿಎಸ್'ನಿಂದ ಜಿ. ಅಮಾನುಲ್ಲಾ ಸ್ಪರ್ಧಿಸುವ ಸಾಧ್ಯತೆಯಿದೆ. ಮಾಯಕೊಂಡದಲ್ಲಿ ಬಿಜೆಪಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಬಿಜೆಪಿಯ ಪ್ರೊ.ಲಿಂಗಣ್ಣ ಟಿಕೆಟ'ಗೆ ಪ್ರಯತ್ನ ನಡೆಸುತ್ತಿದ್ದಾರೆ. ಜತೆಗೆ  ಎಂ.ಬಸವರಾಜ ನಾಯ್ಕ, ಜಿ.ಎಸ್‌.ಶ್ಯಾಮ್‌ , ಅನಿಲ್‌ ಸೇರಿ ಹಲವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.  ಅದೇ ರೀತಿ ಕೆ.ಎಸ್‌.ಬಸವಂತಪ್ಪ, ಡಿ. ಬಸವರಾಜ, ಎಚ್‌.ದುಗ್ಗಪ್ಪ   ಡಾ.ವೈ ರಾಮಪ್ಪ ಸೇರಿ ಹಲವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. 75 ವರ್ಷ ದಾಟಿದವರಿಗೆ ಟಿಕೆಟ್‌ ಇಲ್ಲ ಎಂಬ ಬಿಜೆಪಿಯ ಅಲಿಖಿತ ನಿಯಮ ಅನ್ವಯವಾದರೆ ವಿರುಪಾಕ್ಷಪ್ಪ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ ಸ್ಪರ್ಧೆಗೆ ತಾಲೀಮು ನಡೆಸಿದ್ದಾರೆ.   ಕಾಂಗ್ರೆಸ್ಸಿನಿಂದ ವಡ್ನಾಳ್‌ ರಾಜಣ್ಣ ಹೆಸರು ಕೇಳಿಬರ್ತಿದೆ. ಜೆಡಿಎಸ್‌ನಿಂದ ಇಲ್ಲಿ ಎಂ.ಯೋಗೇಶ ಪ್ರಬಲ ಆಕಾಂಕ್ಷಿ. ಹೊನ್ನಾಳಿಯಲ್ಲಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪರ್ಧೆ ಸ್ಪಷ್ಟ.  
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more