Ground Report : ದಾವಣಗೆರೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನೇರ ಫೈಟ್: ಟಿಕೆಟ್ ಕಸರತ್ತು ಜೋರು

Ground Report : ದಾವಣಗೆರೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನೇರ ಫೈಟ್: ಟಿಕೆಟ್ ಕಸರತ್ತು ಜೋರು

Published : Dec 12, 2022, 05:48 PM IST

ವೀರಶೈವ ಲಿಂಗಾಯತರ ಪ್ರಾಬಲ್ಯದ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಾಂಪ್ರದಾಯಿಕ ಎದುರಾಳಿಗಳು. ಜಿಲ್ಲೆಯಲ್ಲಿ ಟಿಕೆಟ್ ಫೈಟ್ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
 

ದಾವಣಗೆರೆ; ದಾವಣಗೆರೆ ಉತ್ತರ ಕಾಂಗ್ರೆಸ್'ನ ಎಸ್‌.ಎಸ್‌ ಮಲ್ಲಿಕಾರ್ಜುನ ಹಾಗೂ ಬಿಜೆಪಿಯ ಎಸ್‌.ಎ ರವೀಂದ್ರನಾಥ್‌ ಅಖಾಡವಾಗಿದೆ. ಆದರೆ 77ರ ಗಡಿ ದಾಟಿದ ರವೀಂದ್ರನಾಥ ಸ್ಪರ್ಧಿಸುತ್ತಾರೋ, ಇಲ್ಲವೋ ಎಂಬ ಗೊಂದಲವಿದೆ. ಸಂಸದ ಸಿದ್ದೇಶ್ವರ್ ರಾಜ್ಯ ರಾಜಕಾರಣದ ಬಗ್ಗೆ ಒಲವು ತೋರುತ್ತಿದ್ದಾರೆ.  ಕಾಂಗ್ರೆಸ್‌ನ ಮಲ್ಲಿಕಾರ್ಜುನ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿಲ್ಲ. ಪಕ್ಷದ ಸೂಚನೆಯಂತೆ 2 ಲಕ್ಷ ರೂ. ಡಿಡಿ ಕಟ್ಟಿಲ್ಲ. ನಾನು ಅರ್ಜಿ ಸಲ್ಲಿಸುತ್ತೇನೆ. ಆದರೆ, 2 ಲಕ್ಷ ಕೊಡಲ್ಲ ಅನ್ನೋ ಮೂಲಕ ತಮ್ಮ ಟಿಕೆಟ್‌ ಪಕ್ಕಾ ಎಂಬ ಸಂದೇಶ ಸಾರಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿಯಿಂದ ಯಶವಂತರಾವ್ ಸೇರಿ ಅನೇಕರು ಟಿಕೆಟ್ ಆಕಾಂಕ್ಷಿಗಳು, ಜೆಡಿಎಸ್'ನಿಂದ ಜಿ. ಅಮಾನುಲ್ಲಾ ಸ್ಪರ್ಧಿಸುವ ಸಾಧ್ಯತೆಯಿದೆ. ಮಾಯಕೊಂಡದಲ್ಲಿ ಬಿಜೆಪಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಬಿಜೆಪಿಯ ಪ್ರೊ.ಲಿಂಗಣ್ಣ ಟಿಕೆಟ'ಗೆ ಪ್ರಯತ್ನ ನಡೆಸುತ್ತಿದ್ದಾರೆ. ಜತೆಗೆ  ಎಂ.ಬಸವರಾಜ ನಾಯ್ಕ, ಜಿ.ಎಸ್‌.ಶ್ಯಾಮ್‌ , ಅನಿಲ್‌ ಸೇರಿ ಹಲವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.  ಅದೇ ರೀತಿ ಕೆ.ಎಸ್‌.ಬಸವಂತಪ್ಪ, ಡಿ. ಬಸವರಾಜ, ಎಚ್‌.ದುಗ್ಗಪ್ಪ   ಡಾ.ವೈ ರಾಮಪ್ಪ ಸೇರಿ ಹಲವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. 75 ವರ್ಷ ದಾಟಿದವರಿಗೆ ಟಿಕೆಟ್‌ ಇಲ್ಲ ಎಂಬ ಬಿಜೆಪಿಯ ಅಲಿಖಿತ ನಿಯಮ ಅನ್ವಯವಾದರೆ ವಿರುಪಾಕ್ಷಪ್ಪ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ ಸ್ಪರ್ಧೆಗೆ ತಾಲೀಮು ನಡೆಸಿದ್ದಾರೆ.   ಕಾಂಗ್ರೆಸ್ಸಿನಿಂದ ವಡ್ನಾಳ್‌ ರಾಜಣ್ಣ ಹೆಸರು ಕೇಳಿಬರ್ತಿದೆ. ಜೆಡಿಎಸ್‌ನಿಂದ ಇಲ್ಲಿ ಎಂ.ಯೋಗೇಶ ಪ್ರಬಲ ಆಕಾಂಕ್ಷಿ. ಹೊನ್ನಾಳಿಯಲ್ಲಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪರ್ಧೆ ಸ್ಪಷ್ಟ.  
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more