Ground Report: ವಿಜಯಪುರದಲ್ಲಿ  ಟಿಕೆಟ್‌ಗಾಗಿ ಜಿದ್ದಾಜಿದ್ದಿ!

Ground Report: ವಿಜಯಪುರದಲ್ಲಿ ಟಿಕೆಟ್‌ಗಾಗಿ ಜಿದ್ದಾಜಿದ್ದಿ!

Published : Nov 28, 2022, 09:11 PM IST

ರಾಜ್ಯ ರಾಜಕೀಯದ ಕಾವು ನಿಧಾನವಾಗಿ ಏರುತ್ತಿದೆ. ಕರ್ನಾಟಕ ಕುರುಕ್ಷೇತ್ರಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ. ಆದರೆ, ಜಿಲ್ಲೆಗಳಲ್ಲಿ ಚುನಾವಣಾ ಹುರುಪು ಹೇಗಿದೆ. ಟಿಕೆಟ್‌ಗಾಗಿ ಯಾರೆಲ್ಲಾ ಫೈಟ್‌ನಲ್ಲಿ ಇದ್ದಾರೆ ಎನ್ನುವ ಗ್ರೌಂಡ್‌ ರಿಪೋರ್ಟ್‌ನಲ್ಲಿ ಈ ಬಾರಿ ವಿಜಯಪುರ ಜಿಲ್ಲೆಯ ವರದಿ.
 

ವಿಜಯಪುರ (ನ.28): ರಾಜ್ಯ ರಾಜಕೀಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಅದರೊಂದಿಗೆ ಪ್ರತಿ ಜಿಲ್ಲೆಗಳಲ್ಲಿ ನಾಯಕರು ಟಿಕೆಟ್‌ ನಿರೀಕ್ಷೆಯಲ್ಲಿ ಹೋರಾಟ ಆರಂಭಿಸಿದ್ದಾರೆ. ಆಲಮಟ್ಟಿಯ ಊರು ವಿಜಯಪುರದಲ್ಲಿ ಈ ಬಾರಿಯ ರಾಜಕೀಯ ಕಣ ಹೇಗೆಲ್ಲಾ ರಂಗೇರಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಬಿಜೆಪಿಯ ಭದ್ರಕೋಟೆಯಾಗಿರುವ ವಿಜಯಪುರವನ್ನು ಭೇದಿಸಲು ಕಾಂಗ್ರೆಸ್‌ ಶತ ಪ್ರಯತ್ನ ಆರಂಭಿಸಿದೆ. ಇಲ್ಲಿನ ಪ್ರಮುಖ ಬಿಜೆಪಿ ನಾಯಕರಾಗಿರುವ ಬಸವನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಕಾಂಗ್ರೆಸ್‌ನಿಂದ 20 ನಾಯಕರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ನಾಲ್ಕು ಬಿಜೆಪಿ ತೆಕ್ಕೆಯಲ್ಲಿದ್ದರೆ, ಮೂರು ಕಾಂಗ್ರೆಸ್‌ ಪಕ್ಷದ ಕೈಯಲ್ಲಿದ್ದರೆ, ನಾಗಠಾಣಾ ಮೀಸಲು ಕ್ಷೇತ್ರ ಮಾತ್ರ ಜೆಡಿಎಸ್‌ನ ವಶದಲ್ಲಿದೆ.

Ticket Fight: ಯತ್ನಾಳ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ 20 ಆಕಾಂಕ್ಷಿಗಳು

ವೈಯಕ್ತಿಕ ವರ್ಚಸ್ಸು ಮತ್ತು ಹಿಂದುತ್ವದ ಅಜೆಂಡಾದಿಂದ ಜಿಲ್ಲೆಯ ಪ್ರಮುಖ ನಾಯಕರಾಗಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಈ ಬಾರಿಯೂ ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಪಂಚಮಸಾಲಿ ಮೀಸಲು ಹೋರಾಟ ಕೂಡ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ. ಇನ್ನು ಬಬಲೇಶ್ವರದಲ್ಲಿ ಎಂಬಿ ಪಾಟೀಲ್‌ ಭದ್ರಕೋಟ ಭೇದಿಸೋದು ಬಿಜೆಪಿಗೆ ಕಷ್ಟವಾಗಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more