Ground Report: ವಿಜಯಪುರದಲ್ಲಿ  ಟಿಕೆಟ್‌ಗಾಗಿ ಜಿದ್ದಾಜಿದ್ದಿ!

Ground Report: ವಿಜಯಪುರದಲ್ಲಿ ಟಿಕೆಟ್‌ಗಾಗಿ ಜಿದ್ದಾಜಿದ್ದಿ!

Published : Nov 28, 2022, 09:11 PM IST

ರಾಜ್ಯ ರಾಜಕೀಯದ ಕಾವು ನಿಧಾನವಾಗಿ ಏರುತ್ತಿದೆ. ಕರ್ನಾಟಕ ಕುರುಕ್ಷೇತ್ರಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ. ಆದರೆ, ಜಿಲ್ಲೆಗಳಲ್ಲಿ ಚುನಾವಣಾ ಹುರುಪು ಹೇಗಿದೆ. ಟಿಕೆಟ್‌ಗಾಗಿ ಯಾರೆಲ್ಲಾ ಫೈಟ್‌ನಲ್ಲಿ ಇದ್ದಾರೆ ಎನ್ನುವ ಗ್ರೌಂಡ್‌ ರಿಪೋರ್ಟ್‌ನಲ್ಲಿ ಈ ಬಾರಿ ವಿಜಯಪುರ ಜಿಲ್ಲೆಯ ವರದಿ.
 

ವಿಜಯಪುರ (ನ.28): ರಾಜ್ಯ ರಾಜಕೀಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಅದರೊಂದಿಗೆ ಪ್ರತಿ ಜಿಲ್ಲೆಗಳಲ್ಲಿ ನಾಯಕರು ಟಿಕೆಟ್‌ ನಿರೀಕ್ಷೆಯಲ್ಲಿ ಹೋರಾಟ ಆರಂಭಿಸಿದ್ದಾರೆ. ಆಲಮಟ್ಟಿಯ ಊರು ವಿಜಯಪುರದಲ್ಲಿ ಈ ಬಾರಿಯ ರಾಜಕೀಯ ಕಣ ಹೇಗೆಲ್ಲಾ ರಂಗೇರಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಬಿಜೆಪಿಯ ಭದ್ರಕೋಟೆಯಾಗಿರುವ ವಿಜಯಪುರವನ್ನು ಭೇದಿಸಲು ಕಾಂಗ್ರೆಸ್‌ ಶತ ಪ್ರಯತ್ನ ಆರಂಭಿಸಿದೆ. ಇಲ್ಲಿನ ಪ್ರಮುಖ ಬಿಜೆಪಿ ನಾಯಕರಾಗಿರುವ ಬಸವನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಕಾಂಗ್ರೆಸ್‌ನಿಂದ 20 ನಾಯಕರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ನಾಲ್ಕು ಬಿಜೆಪಿ ತೆಕ್ಕೆಯಲ್ಲಿದ್ದರೆ, ಮೂರು ಕಾಂಗ್ರೆಸ್‌ ಪಕ್ಷದ ಕೈಯಲ್ಲಿದ್ದರೆ, ನಾಗಠಾಣಾ ಮೀಸಲು ಕ್ಷೇತ್ರ ಮಾತ್ರ ಜೆಡಿಎಸ್‌ನ ವಶದಲ್ಲಿದೆ.

Ticket Fight: ಯತ್ನಾಳ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ 20 ಆಕಾಂಕ್ಷಿಗಳು

ವೈಯಕ್ತಿಕ ವರ್ಚಸ್ಸು ಮತ್ತು ಹಿಂದುತ್ವದ ಅಜೆಂಡಾದಿಂದ ಜಿಲ್ಲೆಯ ಪ್ರಮುಖ ನಾಯಕರಾಗಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಈ ಬಾರಿಯೂ ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಪಂಚಮಸಾಲಿ ಮೀಸಲು ಹೋರಾಟ ಕೂಡ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ. ಇನ್ನು ಬಬಲೇಶ್ವರದಲ್ಲಿ ಎಂಬಿ ಪಾಟೀಲ್‌ ಭದ್ರಕೋಟ ಭೇದಿಸೋದು ಬಿಜೆಪಿಗೆ ಕಷ್ಟವಾಗಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more