News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

Published : Jul 06, 2023, 11:34 PM IST

ಇಂದು ಸದನ ಮಂಡ್ಯ ವಿಚಾರದಲ್ಲಿ ಅಕ್ಷರಶಃ ರಣಾಂಗಣವಾಗಿತ್ತು. ಕುಮಾರಸ್ವಾಮಿ ಜಮದಗ್ನಿಯ ರೂಪ ತಾಳಿದಂತೆ, ಕಾಂಗ್ರೆಸ್‌ನ ಕಂಡ ಕಂಡ ಸಚಿವರನ್ನು ಮಾತಿನ ಬಾಣದಿಂದ ತಿವಿಯುತ್ತಿದ್ದರು. ಒಂದು ಹಂತದಲ್ಲಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ಧರಾಮಯ್ಯ ನೇರಾನೇರ ಫೈಟ್‌ಗೆ ಇಳಿದಿದ್ದರು.
 

ಬೆಂಗಳೂರು (ಜು.6):  ನಾಗಮಂಗಲದ ಕೆಎಸ್‌ಆರ್‌ಟಿಸಿ ನೌಕರನ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯಿತು. ಈ ವೇಳೆ ಕುಮಾರಸ್ವಾಮಿ ಇದು ಕೊಲೆಗಡುಕ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಸದನದಲ್ಲಿ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ಬೆಂಕಿ-ಬಿರುಗಾಳಿ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ಸ್ಪೀಕರ್‌ ಯುಟಿ ಖಾದರ್‌ ಸದನವನ್ನು ಕೆಲ ಕಾಲ ಮುಂದೂಡಿದರು. ಬಳಿಕ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ತನಿಖೆಯ ಭರವಸೆ ನೀಡಿದ ಬಳಿಕ ಎಚ್‌ಡಿ ಕುಮಾರಸ್ವಾಮಿ ತಣ್ಣಗಾದರು.

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

ಮಂಡ್ಯ ಡಿಎಚ್‌ಓ ಸ್ಥಾನಕ್ಕೆ ಚೆಲುವರಾಯಸ್ವಾಮಿ ತಮ್ಮ ಅಣ್ಣನ ಮಗ ಡಾ.ಮೋಹನ್‌ ಅವರನ್ನು ನೇಮಿಸಿರುವುದು ಕೂಡ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಆತನ ಮೇಲೆ ತನಿಖೆ ಆಗಿದೆ ಅವರನ್ನ ಡಿಎಚ್‌ಓ ಆಗಿ ನೇಮಿಸಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದರೆ, ಶಾಸಕರ ಮನವಿ ಮೇರೆಗೆ ಅವರ ವರ್ಗಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more