News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

Published : Jul 13, 2023, 11:31 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಪ್ರಮುಖವಾಗಿ ವಿಪಕ್ಷಗಳ ವರ್ಗಾವಣೆ ಆರೋಪದ ಬಗ್ಗೆ ಉತ್ತರ ನೀಡಿದರು.
 

ಬೆಂಗಳೂರು (ಜು.13): ವಿಧಾನಸಭೆಯಲ್ಲಿ ಗುರುವಾರ  ವರ್ಗಾವಣೆ ದಂಧೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. 'ನಮ್ಮ ಸರ್ಕಾರ ಬಂದ ಮೇಲೆ ಹೆಚ್ಚು ವರ್ಗಾವಣೆ ಆಗಿರಬಹುದು. ಆದರೆ, ಇದು ಆಡಳಿತಾತ್ಮಕ ವರ್ಗಾವಣೆ. ವರ್ಗಾವಣೆ ಆದಾಗಲೆಲ್ಲಾ ದಂಧೆ, ವ್ಯಾಪಾರ ಅನ್ನೋದು ಹಾಸ್ಯಾಸ್ಪದ' ಎಂದಿದ್ದಾರೆ.

ಇನ್ನೊಂದೆಡೆ, ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್‌ ಎಸೆಯುತ್ತಿದ್ದಾರೆ. ವರ್ಗಾವಣೆ ಡೀಲ್‌, ವೈಎಸ್‌ಟಿ ಟ್ಯಾಕ್ಸ್‌ ಎಂದು ಟೀಕೆ ಮಾಡಿರುವ ಎಚ್‌ಡಿಕೆ, ಕಾಂಗ್ರೆಸ್‌ನಲ್ಲಿಯೇ ಗುಂಪುಗಾರಿಕೆ ಇದೆ. ಕೆಲವರನ್ನು ಉದುರಿಸಲು ಕಾಂಗ್ರೆಸ್ ಶಾಸಕರು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಅದರೊಂದಿಗೆ ಸದನದಲ್ಲಿ ಮತ್ತೊಮ್ಮೆ ಅಕ್ಕಿ ರಾಜಕೀಯ ಪ್ರಸ್ತಾಪವಾಯಿತು. ಅಕ್ಕಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ಸಿದ್ಧರಾಮಯ್ಯ ಗರಂ ಆದರು. ಅಕ್ಕಿ ಘೋಷಣೆ ಮಾಡಿ ಬಿಜೆಪಿಯವರು ಅಕ್ಕಿ ಕೊಡ್ತಾ ಇಲ್ಲ ಅಂದ್ರೆ ಹೇಗೆ ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more