ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

Published : Nov 21, 2024, 08:54 PM IST

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ದೊಡ್ಡ ರಾಜಕೀಯ ಬದಲಾವಣೆಗಳು ಸಂಭವಿಸಬಹುದು. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಪೈಪೋಟಿ, ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಶಿಗ್ಗಾಂವಿ ಮತ್ತು ಸಂಡೂರಿನ ಫಲಿತಾಂಶಗಳು ಕೂಡ ಪ್ರಮುಖ ನಾಯಕರ ರಾಜಕೀಯದ ಮೇಲೆ ಪ್ರಭಾವ ಬೀರಲಿವೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೂ ಒಂದು ದಿನ ಕಾಯಬೇಕಿದೆ. ಆದರೆ, ಚನ್ನಪಟ್ಟಣದಲ್ಲಿ ರಿಸಲ್ಟ್ ಏನೇ ಬಂದರೂ ದೊಡ್ಡ ರಾಜಕೀಯ ಬದಲಾವಣೆಯಂತೂ ಆಗುತ್ತದೆ. ಮಾಜಿ ಶಸಕ ಸಿ.ಪಿ. ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣದ ಶಾಸಕ ಪಟ್ಟ ಬೇಕು. ಇಷ್ಟಕ್ಕೆ ಮಾತ್ರವೇ ಬೊಂಬೆನಾಡಿನ ರಣಾಂಗಣ ಸೀಮಿತವಾಗಿರಲಿಲ್ಲ. ಇವರಬ್ಬರ ಸೋಲು-ಗೆಲುವು ಮತ್ತಿಬ್ಬರು ದಿಗ್ಗಜ ನಾಯಕರ ಪಾಲಿಟಿಕ್ಸ್ ಮೇಲೆ ಪ್ರಭಾವ ಬೀರುತ್ತದೆ.

ಒಂದು ಕಡೆ ಕನಕಪುರ ಬಂಡೆ ಖ್ಯಾತಿಯ ಡಿಸಿಎಂ ಡಿ.ಕೆ. ಶಿವಕುಮಾರ್ ಗಟ್ಟಿಯಾಗೋದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರಿಗೆ ವಿಜಯಮಾಲೆ ಒಲಿಯಲೇಬೇಕು. ಮತ್ತೊಂದೆಡೆ ದಳಪತಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಶಕ್ತಿ ಬೇಕು ಎಂದರೆ ಅವರ ಪುತ್ರನಿಗೆ ಗೆಲವು ಪ್ರಾಪ್ತಿಯಾಗಲೇಬೇಕು. ಇಲ್ಲವಾದರೆ, ಇಬ್ಬರಿಗೂ ಮುಂದೆ ಕಾದಿರೋದು ಮಹಾ ಆಪತ್ತು. ಒಬ್ಬರಿಗೆ ಸಿಎಂ ಕನಸಿನ್ನು ಈಡೇರಿಸಿದರೆ, ಮತ್ತೊಬ್ಬರಿಗೆ ತನ್ನ ನಂತರದ ರಾಜಕೀಯ ರಾಯಭಾರಿ ಹುಟ್ಟಲಿದ್ದಾರೆ.

ಇದು ಚನ್ನಪಟ್ಟಣ ಕಥೆಯಾದರೆ, ಶಿಗ್ಗಾಂವಿ ಹಾಗೂ ಸಂಡೂರಿನ ಫಲಿತಾಂಶವೂ ಕೆಲವು  ದಿಗ್ಗಜರ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಸಂಡೂರು ಹಾಗೂ ಶಿಗ್ಗಾಂವಿ ಚುನಾವಣಾ ರಿಸೆಲ್ಟ್ ಕೇವಲ ಅಭ್ಯರ್ಥಿಗಳಿಗೆ ಮಾತ್ರವೇ ಇಂಪಾರ್ಟೆಂಟ್ ಆಗಿ ಉಳಿದಿಲ್ಲ. ಕೆಲವು ಪ್ರಮುಖ ನಾಯಕರ ಮುಂದಿನ ರಾಜಕೀಯದ ಮೇಲೂ ಇಲ್ಲಿನ ಸೋಲು, ಗೆಲುವಿನ ಫ್ಯಾಕ್ಟರ್ ಪ್ರಭಾವ ಬೀರೋ ಸಾಧ್ಯತೆಯಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ