ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

Published : Nov 21, 2024, 08:54 PM IST

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ದೊಡ್ಡ ರಾಜಕೀಯ ಬದಲಾವಣೆಗಳು ಸಂಭವಿಸಬಹುದು. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಪೈಪೋಟಿ, ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಶಿಗ್ಗಾಂವಿ ಮತ್ತು ಸಂಡೂರಿನ ಫಲಿತಾಂಶಗಳು ಕೂಡ ಪ್ರಮುಖ ನಾಯಕರ ರಾಜಕೀಯದ ಮೇಲೆ ಪ್ರಭಾವ ಬೀರಲಿವೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೂ ಒಂದು ದಿನ ಕಾಯಬೇಕಿದೆ. ಆದರೆ, ಚನ್ನಪಟ್ಟಣದಲ್ಲಿ ರಿಸಲ್ಟ್ ಏನೇ ಬಂದರೂ ದೊಡ್ಡ ರಾಜಕೀಯ ಬದಲಾವಣೆಯಂತೂ ಆಗುತ್ತದೆ. ಮಾಜಿ ಶಸಕ ಸಿ.ಪಿ. ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣದ ಶಾಸಕ ಪಟ್ಟ ಬೇಕು. ಇಷ್ಟಕ್ಕೆ ಮಾತ್ರವೇ ಬೊಂಬೆನಾಡಿನ ರಣಾಂಗಣ ಸೀಮಿತವಾಗಿರಲಿಲ್ಲ. ಇವರಬ್ಬರ ಸೋಲು-ಗೆಲುವು ಮತ್ತಿಬ್ಬರು ದಿಗ್ಗಜ ನಾಯಕರ ಪಾಲಿಟಿಕ್ಸ್ ಮೇಲೆ ಪ್ರಭಾವ ಬೀರುತ್ತದೆ.

ಒಂದು ಕಡೆ ಕನಕಪುರ ಬಂಡೆ ಖ್ಯಾತಿಯ ಡಿಸಿಎಂ ಡಿ.ಕೆ. ಶಿವಕುಮಾರ್ ಗಟ್ಟಿಯಾಗೋದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರಿಗೆ ವಿಜಯಮಾಲೆ ಒಲಿಯಲೇಬೇಕು. ಮತ್ತೊಂದೆಡೆ ದಳಪತಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಶಕ್ತಿ ಬೇಕು ಎಂದರೆ ಅವರ ಪುತ್ರನಿಗೆ ಗೆಲವು ಪ್ರಾಪ್ತಿಯಾಗಲೇಬೇಕು. ಇಲ್ಲವಾದರೆ, ಇಬ್ಬರಿಗೂ ಮುಂದೆ ಕಾದಿರೋದು ಮಹಾ ಆಪತ್ತು. ಒಬ್ಬರಿಗೆ ಸಿಎಂ ಕನಸಿನ್ನು ಈಡೇರಿಸಿದರೆ, ಮತ್ತೊಬ್ಬರಿಗೆ ತನ್ನ ನಂತರದ ರಾಜಕೀಯ ರಾಯಭಾರಿ ಹುಟ್ಟಲಿದ್ದಾರೆ.

ಇದು ಚನ್ನಪಟ್ಟಣ ಕಥೆಯಾದರೆ, ಶಿಗ್ಗಾಂವಿ ಹಾಗೂ ಸಂಡೂರಿನ ಫಲಿತಾಂಶವೂ ಕೆಲವು  ದಿಗ್ಗಜರ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಸಂಡೂರು ಹಾಗೂ ಶಿಗ್ಗಾಂವಿ ಚುನಾವಣಾ ರಿಸೆಲ್ಟ್ ಕೇವಲ ಅಭ್ಯರ್ಥಿಗಳಿಗೆ ಮಾತ್ರವೇ ಇಂಪಾರ್ಟೆಂಟ್ ಆಗಿ ಉಳಿದಿಲ್ಲ. ಕೆಲವು ಪ್ರಮುಖ ನಾಯಕರ ಮುಂದಿನ ರಾಜಕೀಯದ ಮೇಲೂ ಇಲ್ಲಿನ ಸೋಲು, ಗೆಲುವಿನ ಫ್ಯಾಕ್ಟರ್ ಪ್ರಭಾವ ಬೀರೋ ಸಾಧ್ಯತೆಯಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!