JDS ಭದ್ರಕೋಟೆ ಭೇದಿಸಲು BJPಯಿಂದ KR ಪೇಟೆಗೆ ಪ್ರತ್ಯೇಕ ಪ್ರಣಾಳಿಕೆ ರಿಲೀಸ್

Dec 2, 2019, 4:42 PM IST

ಬಿಜೆಪಿಯ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಕೆಆರ್ ಪೇಟೆ ಉಪಚುನಾವಣೆಯ ಬಿರುಸಿನ ಪ್ರಚಾರ ನಡೆಯುತ್ತಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದ ಅನರ್ಹ ಶಾಸಕ ನಾರಾಯಣ ಗೌಡ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಬಿಜೆಪಿ, ಕೆಆರ್ ಪೇಟೆ ಕ್ಷೇತ್ರಕ್ಕಾಗಿ ಅಂತಾನೇ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.