News Hour: ಯುದ್ಧ ಘೋಷಣೆಗೂ ಮುನ್ನವೇ ಬಿಜೆಪಿ ತಾಲೀಮು: ಜುಲೈ 28ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಾಧನಾ ಸಮಾವೇಶ

News Hour: ಯುದ್ಧ ಘೋಷಣೆಗೂ ಮುನ್ನವೇ ಬಿಜೆಪಿ ತಾಲೀಮು: ಜುಲೈ 28ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಾಧನಾ ಸಮಾವೇಶ

Published : Jul 15, 2022, 10:39 PM IST

BJP Sadhana Samavesha: ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷ ಹಿನ್ನೆಲೆ, ಬಿಜೆಪಿ ಸುಮಾರು 1 ಲಕ್ಷ ಕಾರ್ಯಕರ್ತರನ್ನು ಸೇರಿಸಿ‌ ಸರ್ಕಾರದ ಒಂದು ವರ್ಷದ ಸಾಧನೆ ತಿಳಿಸುವ ಪ್ರಯತ್ನ ಮಾಡಲಿದೆ. 

ಬೆಂಗಳೂರು (ಜು. 15): ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಆಡಳಿತಾರೂಢ ಬಿಜೆಪಿ ಈಗ ಮತ್ತೆ ಚುನಾವಣಾ ಮೂಡ್‌ಗೆ ಬಂದಿದೆ. 2023ರ ಚುನಾವಣೆ ಎದುರಿಸಲು ಆಗಲೇ ಅಖಾಡಕ್ಕಿಳಿದ ರಾಜ್ಯ ಬಿಜೆಪಿಯಲ್ಲಿ ಇಂದಿನಿಂದ ಮ್ಯಾರಥಾನ್ ಮೀಟಿಂಗ್ ಶುರುವಾಗಿದೆ. ಬೆಂಗಳೂರಿನ ಹೊರವಲಯದಲ್ಲಿ ಸಂಘಪರಿವಾರ ಮತ್ತು ಬಿಜೆಪಿ ನಾಯಕರ ಜಂಟಿ ಚಿಂತನಾ ಶಿಬಿರ ನಡೆಯಿತು. ಬಿಜೆಪಿ ಮೊದಲ ದಿನದ ಚಿಂತನಾ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಚಿಕ್ಕಬಳ್ಳಾಪುರದಲ್ಲಿ  ಜುಲೈ 28ಕ್ಕೆ ಬಿಜೆಪಿ ಬೃಹತ್ ಸಾಧನಾ ಸಮಾವೇಶ  ನಡೆಯಲಿದೆ. ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷ ಹಿನ್ನೆಲೆ, ಬಿಜೆಪಿ ಸುಮಾರು 1 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಟಾರ್ಗೆಟ್ ಹೊಂದಿದೆ.  ಈ ಸಮಾವೇಶದಲ್ಲಿ‌ ಸರ್ಕಾರದ ಒಂದು ವರ್ಷದ ಸಾಧನೆ ತಿಳಿಸುವ ಪ್ರಯತ್ನ ಬಿಜೆಪಿ ಮಾಡಲಿದೆ. 

ಇನ್ನು ಬಿಜೆಪಿ ಘಟಾನುಘಟಿ ನಾಯಕರು ಭಾಗಿಯಾಗಿ ಇಂದಿನ ಶಿಬಿರದಲ್ಲಿ ಚುನಾವಣೆ ಮಂತ್ರ ಪಠಿಸಿದ್ರು. ಮುಖ್ಯವಾಗಿ ಸರ್ಕಾರದ ಕಾರ್ಯವೈಖರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಮಾಡಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಯಿತು.  ಸಿಎಂ ಬೊಮ್ಮಾಯಿ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ಪಾಳಯದ ದಿಗ್ಗಜ ನಾಯಕರು ಸರಕಾರದ ಕಾರ್ಯವೈಖರಿಯನ್ನು ಅವಲೋಕನ ಮಾಡಿದರು. ನಿರೀಕ್ಷಿತ ವೇಗದಲ್ಲಿ ಜನರ ಆಶಯಕ್ಕೆ ಪೂರಕವಾಗಿ ಕೆಲಸ ಮಾಡಲು ಸರ್ಕಾರದ ವೇಗ ಹೆಚ್ಚಿಸಲು ಸಭೆಯಲ್ಲಿ ಸರ್ವಸಮ್ಮತ ಸಲಹೆ ನೀಡಲಾಯ್ತು.

ಬಿಜೆಪಿ-ಸಂಘಪರಿವಾರದ ಜಂಟಿ ಸಭೆಯಲ್ಲಿ ರಾಜ್ಯ ಸರ್ಕಾರದ ಕೆಲ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಪ್ರಾಂತ್ಯ, ಜಿಲ್ಲೆಗಷ್ಟೇ ಸೀಮಿತವಾದ ಸಚಿವರ ನಡವಳಿಕೆಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು. ಕೆಲ ಸಚಿವರು ತಮ್ಮ ಈ ಕಾರ್ಯವೈಖರಿ ಬದಲಾಯಿಸಿಕೊಳ್ಳೋ ಅನಿವಾರ್ಯತೆಯಿದೆ ಎಂದು ಸಭೆಯಲ್ಲಿ ಸೂಚಿಸಲಾಯ್ತು. 

ಇದನ್ನೂ ನೋಡಿ: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ: ಪಿಎಫ್ಐ ಮಹಾ ಷಡ್ಯಂತ್ರ ಬಯಲು

ಇನ್ನು ಪ್ರತಿಪಕ್ಷಗಳಿಂದ ಆಗಾಗ್ಗೆ ಸರ್ಕಾರದ ಮೇಲೆ ವ್ಯಕ್ತವಾಗುತ್ತಿರುವ ಆರೋಪಗಳನ್ನು ಲಘುವಾಗಿ ಪರಿಗಣಿಸಬಾರದು. ಕೆಲಸದ ಮೂಲಕವೇ ತಿರುಗೇಟು ನೀಡಲು ಪ್ಲಾನ್ ಮಾಡಬೇಕಿದೆ. ಈ ನಿಟ್ಟಿನಲ್ಲಿ ಹಿರಿಯ ನಾಯಕರ ಸಲಹೆಯಂತೆ ಸಕಾರಾತ್ಮಕ ಪರಿಣಾಮಗಳನ್ನು ಬೀರುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ಇನ್ನು ಚುನಾವಣಾ ವರ್ಷವಾಗಿರುವುದರಿಂದ  ಪಕ್ಷದ ನಾಯಕರು, ಸಚಿವರು ಮತ್ತು ಶಾಸಕರು ಸಾರ್ವಜನಿಕವಾಗಿ ಅಶಿಸ್ತು ಪ್ರದರ್ಶಿಸಬಾರದು. ಪಕ್ಷಕ್ಕೆ ಕಳಂಕ ತರುವ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಕಟ್ಟಪ್ಪಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿರೋದರಿಂದ ಪಕ್ಷಕ್ಕೆ ಅತಿಹೆಚ್ಚು ಶಾಸಕರನ್ನು ಕೊಟ್ಟಿರುವ ಬೆಂಗಳೂರು ನಗರದ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಚುನಾವಣೆ ನಡೆಸುವ ಕುರಿತು ತಕ್ಷಣವೇ ಸ್ಪಷ್ಟತೆಯನ್ನು ನೀಡಬೇಕಿದ್ದು, ಗೊಂದಲ ಪರಿಹಾರಕ್ಕೆ ಸರ್ಕಾರ ಮುಂದಾಗಲಿ ಎಂದು ಸಭೆಯಲ್ಲಿ ಸಲಹೆ ವ್ಯಕ್ತವಾಗಿದೆ. 

ಪಕ್ಷ ಮತ್ತು ಸರ್ಕಾರದ ಮಧ್ಯೆ ಹೊಂದಾಣಿಕೆ ಮುಖ್ಯ. ಹೊಂದಾಣಿಕೆಯೊಂದಿಗೆ ಮತ್ತೊಂದು ಬಾರಿ ಜನತೆಯ ಆಶೀರ್ವಾದ ಪಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ದಿಗ್ವಿಜಯದ ಜಪ ಮಾಡಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more