ಸಿಂದಗಿ ಬೈ ಎಲೆಕ್ಷನ್‌ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ!

Oct 22, 2021, 11:11 AM IST

ವಿಜಯಪುರ, (ಅ.22): ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಗೆಲುವಿಗೆ ಭರ್ಜರಿ ಮತ ಬೇಟೆಯಲ್ಲಿ ನಿರತರಾಗಿದ್ದಾರೆ.

'ಮೋದಿ, ನಾವು ಮುಸ್ಲಿಂ ಬಂಧುಗಳಿಗೆ ಅನ್ಯಾಯ ಮಾಡಿರುವ 1 ಉದಾಹರಣೆ ಇದ್ರೆ ಕೊಡಿ'

ಅದರಲ್ಲೂ ಸಿಂದಗಿಯಲ್ಲಿ ಕಳೆದ ಎರಡು ದಿನಗಳಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಭ್ಯರ್ಥಿ ರಮೇಶ್ ಭೂಸನೂರ ಪರ ಕ್ಯಾಂಪೇನ್ ಮಾಡಿದ್ರು, ಇದೀಗ ಬಿಎಸ್‌ವೈ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಿಂದಗಿ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ.