ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

Published : Jul 03, 2023, 09:42 AM IST

ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನೀಡಲು ಆಡಳಿತ ಪಕ್ಷ ತಯಾರಿ ಮಾಡಿಕೊಂಡಿದೆ.

ಬೆಂಗಳೂರು: ಹೊಸ ಸರ್ಕಾರದ ಚೊಚ್ಚಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್ ಗೆಹಲೋತ್‌ ಅವರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಸದ್ಯ ರಾಜ್ಯಪಾಲರ ಭಾಷಣದ ಬಗ್ಗೆ ಭಾರೀ ಕುತೂಹಲ ಮೂಡಿದೆ. ಬಳಿಕ ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಾಕ್ಸಮರ ನಡೆಯುವುದು ಗ್ಯಾರಂಟಿಯಾಗಿದೆ. ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆಯಂತಹ ವಿವಾದಿತ ಕಾಯಿದೆ ರದ್ದುಗೊಳಿಸಲು ತಿದ್ದುಪಡಿ ವಿಧೇಯಕಗಳ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕೆ ಪ್ರತಿಯಾಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪ ಸೇರಿದಂತೆ ವಿವಿಧ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಜು.3ರಿಂದ 14ರವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಜು.7ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?