ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

Published : Jul 03, 2023, 09:42 AM IST

ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನೀಡಲು ಆಡಳಿತ ಪಕ್ಷ ತಯಾರಿ ಮಾಡಿಕೊಂಡಿದೆ.

ಬೆಂಗಳೂರು: ಹೊಸ ಸರ್ಕಾರದ ಚೊಚ್ಚಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್ ಗೆಹಲೋತ್‌ ಅವರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಸದ್ಯ ರಾಜ್ಯಪಾಲರ ಭಾಷಣದ ಬಗ್ಗೆ ಭಾರೀ ಕುತೂಹಲ ಮೂಡಿದೆ. ಬಳಿಕ ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಾಕ್ಸಮರ ನಡೆಯುವುದು ಗ್ಯಾರಂಟಿಯಾಗಿದೆ. ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆಯಂತಹ ವಿವಾದಿತ ಕಾಯಿದೆ ರದ್ದುಗೊಳಿಸಲು ತಿದ್ದುಪಡಿ ವಿಧೇಯಕಗಳ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕೆ ಪ್ರತಿಯಾಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪ ಸೇರಿದಂತೆ ವಿವಿಧ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಜು.3ರಿಂದ 14ರವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಜು.7ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!