Oct 14, 2020, 10:37 AM IST
ಬೆಂಗಳೂರು (ಅ. 14): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿದೆ. ಚೌಡೇಶ್ವರಿ ದೇವಿಯ ದರ್ಶನದ ಬಳಿಕ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಸಂದರ್ಭದಲ್ಲಿ ಮುನಿರತ್ನ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಮನಸ್ತಾಪಗಳಿಲ್ಲ. ಎಲ್ಲವೂ ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ನಾವು ಈಗಾಗಲೇ 6 ಚುನಾವಣೆ ಎದುರಿಸಿದ್ದೇನೆ. ಜನರ ನಾಡಿ ಮಿಡಿತ ನನಗೆ ಗೊತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾನು ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ ಎಂದಿದ್ದಾರೆ.