ಅನರ್ಹರಿಗೆ ಸೋಲಿನ ರುಚಿ; ಡಿಕೆಶಿ ಲಾಜಿಕ್‌ಗೆ ಜೆಡಿಎಸ್ ಕಾರ್ಯಕರ್ತರು ರೆಡಿ?

Nov 29, 2019, 12:14 PM IST

ಬೆಂಗಳೂರು (ನ.29): ಉಪಚುನಾವಣೆಗೆ ಇನ್ನೊಂದು ವಾರ ಬಾಕಿಯಿದೆ. ರಾಜಕೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅನರ್ಹ ಶಾಸಕರಿಗೆ ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಣತಂತ್ರ ಹೆಣೆದಿದ್ದಾರೆ, ಒಳಮೈತ್ರಿ ಕೂಡಾ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ನಾಯಕ  ಡಿ.ಕೆ. ಶಿವಕುಮಾರ್ ಚುನಾವಣಾ ಪ್ರಚಾರ ಸಭೆಯಲ್ಲಿ ಆಡಿದ ಮಾತು ಅದಕ್ಕೆ ತಾಜಾ ಉದಾಹರಣೆಯೆಂಬಂತಿದೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ... 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದ್ದು, ಒಟ್ಟು 165 ಮಂದಿ ಕಣದಲ್ಲಿದ್ದದಾರೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.