ಮಂತ್ರಿಗಿರಿ ಬಗ್ಗೆ ಒಂದೇ ಒಂದು ಮಾತು ಹೇಳಿದ ಬೈರತಿ ಬಸವರಾಜ್

Jan 31, 2020, 4:57 PM IST

ಬೆಂಗಳೂರು(ಜ. 31)  ಕೊಟ್ಟ ಮಾತಿನಂತೆ ಸಿಎಂ ಬಿಎಸ್ ಯಡಿಯೂರಪ್ಪ ನಡೆದುಕೊಳ್ಳುತ್ತಾರೇ ಎನ್ನುವ ವಿಶ್ವಾಸ ನಮಗಿದೆ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಮುಗಿಸಿ ಬಂದ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ.

ರಹಸ್ಯ ಸ್ಥಳಕ್ಕೆ ತೆರಳಿದ ಶಾಸಕರು, ಪಟ್ಟಿಯಲ್ಲಿ ಯಾರ್ಯಾರು?

ಸಚಿವ ಸಂಪುಟದ ಚೆಂಡು ಸದ್ಯ ದೆಹಲಿ ಅಂಗಳದಲ್ಲಿದೆ. ಬಿಜೆಪಿ ಸೇರಿ ಉಪಚುನಾವಣೆ ಎದುರಿಸಿ ಗೆದ್ದ ಶಾಸಕರು ಸಚಿವ ಸ್ಥಾನದ ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಅಧಿಕಾರ ಹಂಚಲಿದೆ ಎಂಬ ಮಾತು ಕೇಳಿ ಬಂದಿದೆ.