ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

Published : Sep 10, 2024, 06:20 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಉರುಳು ಸುತ್ತಿಕೊಳ್ಳುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಸೀಟಿಗೆ ಟವೆಲ್ ಹಾಕುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲೀಗ ಮುಖ್ಯಮಂತ್ರಿ ಕುರ್ಚಿಗೆ ಮ್ಯೂಸಿಕಲ್ ಚೇರ್ ಶುರುವಾಗಿದೆ. ಮಡಾ ಟೆನ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ರೆ ಆಕಾಂಕ್ಷಿಗಳಿಗೆ ಕುರ್ಚಿ ಆಸೆ ಆರಂಭವಾಗಿದೆ.. ಚಾನ್ಸ್ ಸಿಕ್ರೆ ನಾನು ಕೂಡ ಸಿಎಂ ಆಗಿಬಿಡೋಣ ಅಂತ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕ್ತಾ ಇರೋದು ಯಾರ್ಯಾರು..?ಈ ಎಲ್ಲದರ ಮಧ್ಯೆ ಸಿದ್ದರಾಮಯ್ಯ ಪರವಾಗಿ ನಿಂತಿದ್ದ ಡಿ.ಕೆ.ಶಿವಕುಮಾರ್ ಅವರ ಆ ಒಂದು ಲೆಕ್ಕಾಚಾರ ತಪ್ತಾ ಇರೋದು ಹೇಗೆ..? ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಗೆ ಕಾಂಗ್ರೆಸ್ನಲ್ಲಿ ಶುರುವಾಗಿರುವ ಆಂತರಿಕ ಪೊಲಿಟಿಕಲ್ ದಂಗಲ್ ಸ್ಟೋರಿ ಇಲ್ಲಿದೆ ನೋಡಿ..

ರಾಜ್ಯದಲ್ಲಿ ಹಲವು ನಾಯಕರ ಕಣ್ಣು ಸಿಎಂ ಕುರ್ಚಿಯ ಮೇಲೆ ಬದ್ದಿದೆ. ಚಾನ್ಸ್ ಸಿಕ್ರೆ ಕೂತು ಬಿಡೋಣ ಅಂತ ತುದಿಗಾಲಲ್ಲಿ ನಿಂತಂತೆ ಕಾಣ್ತಾ ಇದೆ.. ಹಾಗಾಗಿನೇ ಏನೋ ಅಂತರಂಗದ ಆಸೆಗಳು ಬಹಿರಂಗವಾಗಿ ವ್ಯಕ್ತವಾಗ್ತಿವೆ. ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇದ್ರಿಂದ ಕೈ ಪಾಳಯದ ಒಳಗೆ ನಡೆಯುತ್ತಿದೆ ಮುಸುಕಿನ ಗುದ್ದಾಟ, ಮಾತಿನ ಜಟಾಪಟಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿಯ ಬಗ್ಗೆ ಶುರುವಾಗಿರುವ ಚರ್ಚೆಯಿಂದ ಸಿಎಂ ಸಿದ್ದರಾಮಯ್ಯಗೆ ಮಾತ್ರ ಟೆನ್ಷನ್ ಆಗ್ತಿಲ್ಲ. ಅವರ ಜೊತೆಗೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವ್ರಿಗೂ ತಲೆಬಿಸಿ ಶುರುವಾದಂತಿದೆ. ತನ್ನೆಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗೋ ಆತಂಕದಲ್ಲಿ ಅವರಿದ್ದ ಹಾಗಿದೆ. 

ಅಂತೂ ಭರ್ಜರಿ ಬಹುಮತ ಇದ್ದೂ ಕೂಡ, ಬಲಿಷ್ಠ ಸರ್ಕಾರ ನಡೆಸೋದೇ ಕಷ್ಟಕ್ಕೆ ಬಂದಿದೆ ಸಿದ್ದರಾಮಯ್ಯನೋರಿಗೆ.. ಮುಡಾ ಗ್ರಹಣದ ಎಫೆಕ್ಟ್ನಿಂದ ಸಿಎಂ ಪಾರಾಗೋ ಹೊತ್ತಿಗೆ ಇನ್ನೂ ಏನೇನು ಸಂಗತಿಗಳು ಘಟಿಸುತ್ತವೋ ಗೊತ್ತಿಲ್ಲ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?