ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

Published : Sep 10, 2024, 06:20 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಉರುಳು ಸುತ್ತಿಕೊಳ್ಳುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಸೀಟಿಗೆ ಟವೆಲ್ ಹಾಕುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲೀಗ ಮುಖ್ಯಮಂತ್ರಿ ಕುರ್ಚಿಗೆ ಮ್ಯೂಸಿಕಲ್ ಚೇರ್ ಶುರುವಾಗಿದೆ. ಮಡಾ ಟೆನ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ರೆ ಆಕಾಂಕ್ಷಿಗಳಿಗೆ ಕುರ್ಚಿ ಆಸೆ ಆರಂಭವಾಗಿದೆ.. ಚಾನ್ಸ್ ಸಿಕ್ರೆ ನಾನು ಕೂಡ ಸಿಎಂ ಆಗಿಬಿಡೋಣ ಅಂತ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕ್ತಾ ಇರೋದು ಯಾರ್ಯಾರು..?ಈ ಎಲ್ಲದರ ಮಧ್ಯೆ ಸಿದ್ದರಾಮಯ್ಯ ಪರವಾಗಿ ನಿಂತಿದ್ದ ಡಿ.ಕೆ.ಶಿವಕುಮಾರ್ ಅವರ ಆ ಒಂದು ಲೆಕ್ಕಾಚಾರ ತಪ್ತಾ ಇರೋದು ಹೇಗೆ..? ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಗೆ ಕಾಂಗ್ರೆಸ್ನಲ್ಲಿ ಶುರುವಾಗಿರುವ ಆಂತರಿಕ ಪೊಲಿಟಿಕಲ್ ದಂಗಲ್ ಸ್ಟೋರಿ ಇಲ್ಲಿದೆ ನೋಡಿ..

ರಾಜ್ಯದಲ್ಲಿ ಹಲವು ನಾಯಕರ ಕಣ್ಣು ಸಿಎಂ ಕುರ್ಚಿಯ ಮೇಲೆ ಬದ್ದಿದೆ. ಚಾನ್ಸ್ ಸಿಕ್ರೆ ಕೂತು ಬಿಡೋಣ ಅಂತ ತುದಿಗಾಲಲ್ಲಿ ನಿಂತಂತೆ ಕಾಣ್ತಾ ಇದೆ.. ಹಾಗಾಗಿನೇ ಏನೋ ಅಂತರಂಗದ ಆಸೆಗಳು ಬಹಿರಂಗವಾಗಿ ವ್ಯಕ್ತವಾಗ್ತಿವೆ. ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇದ್ರಿಂದ ಕೈ ಪಾಳಯದ ಒಳಗೆ ನಡೆಯುತ್ತಿದೆ ಮುಸುಕಿನ ಗುದ್ದಾಟ, ಮಾತಿನ ಜಟಾಪಟಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿಯ ಬಗ್ಗೆ ಶುರುವಾಗಿರುವ ಚರ್ಚೆಯಿಂದ ಸಿಎಂ ಸಿದ್ದರಾಮಯ್ಯಗೆ ಮಾತ್ರ ಟೆನ್ಷನ್ ಆಗ್ತಿಲ್ಲ. ಅವರ ಜೊತೆಗೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವ್ರಿಗೂ ತಲೆಬಿಸಿ ಶುರುವಾದಂತಿದೆ. ತನ್ನೆಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗೋ ಆತಂಕದಲ್ಲಿ ಅವರಿದ್ದ ಹಾಗಿದೆ. 

ಅಂತೂ ಭರ್ಜರಿ ಬಹುಮತ ಇದ್ದೂ ಕೂಡ, ಬಲಿಷ್ಠ ಸರ್ಕಾರ ನಡೆಸೋದೇ ಕಷ್ಟಕ್ಕೆ ಬಂದಿದೆ ಸಿದ್ದರಾಮಯ್ಯನೋರಿಗೆ.. ಮುಡಾ ಗ್ರಹಣದ ಎಫೆಕ್ಟ್ನಿಂದ ಸಿಎಂ ಪಾರಾಗೋ ಹೊತ್ತಿಗೆ ಇನ್ನೂ ಏನೇನು ಸಂಗತಿಗಳು ಘಟಿಸುತ್ತವೋ ಗೊತ್ತಿಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!