ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಖುರ್ಚಿ ಖಾಲಿಯಾಗ್ತಿದೆ ಅಂತಾ ಟವೆಲ್ ಹಾಕ್ತಿದ್ದಾರೆ?

Published : Sep 10, 2024, 06:20 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಉರುಳು ಸುತ್ತಿಕೊಳ್ಳುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಕಂಡ ಕಂಡೋರೆಲ್ಲಾ ಸಿಎಂ ಸೀಟಿಗೆ ಟವೆಲ್ ಹಾಕುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲೀಗ ಮುಖ್ಯಮಂತ್ರಿ ಕುರ್ಚಿಗೆ ಮ್ಯೂಸಿಕಲ್ ಚೇರ್ ಶುರುವಾಗಿದೆ. ಮಡಾ ಟೆನ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ರೆ ಆಕಾಂಕ್ಷಿಗಳಿಗೆ ಕುರ್ಚಿ ಆಸೆ ಆರಂಭವಾಗಿದೆ.. ಚಾನ್ಸ್ ಸಿಕ್ರೆ ನಾನು ಕೂಡ ಸಿಎಂ ಆಗಿಬಿಡೋಣ ಅಂತ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕ್ತಾ ಇರೋದು ಯಾರ್ಯಾರು..?ಈ ಎಲ್ಲದರ ಮಧ್ಯೆ ಸಿದ್ದರಾಮಯ್ಯ ಪರವಾಗಿ ನಿಂತಿದ್ದ ಡಿ.ಕೆ.ಶಿವಕುಮಾರ್ ಅವರ ಆ ಒಂದು ಲೆಕ್ಕಾಚಾರ ತಪ್ತಾ ಇರೋದು ಹೇಗೆ..? ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಗೆ ಕಾಂಗ್ರೆಸ್ನಲ್ಲಿ ಶುರುವಾಗಿರುವ ಆಂತರಿಕ ಪೊಲಿಟಿಕಲ್ ದಂಗಲ್ ಸ್ಟೋರಿ ಇಲ್ಲಿದೆ ನೋಡಿ..

ರಾಜ್ಯದಲ್ಲಿ ಹಲವು ನಾಯಕರ ಕಣ್ಣು ಸಿಎಂ ಕುರ್ಚಿಯ ಮೇಲೆ ಬದ್ದಿದೆ. ಚಾನ್ಸ್ ಸಿಕ್ರೆ ಕೂತು ಬಿಡೋಣ ಅಂತ ತುದಿಗಾಲಲ್ಲಿ ನಿಂತಂತೆ ಕಾಣ್ತಾ ಇದೆ.. ಹಾಗಾಗಿನೇ ಏನೋ ಅಂತರಂಗದ ಆಸೆಗಳು ಬಹಿರಂಗವಾಗಿ ವ್ಯಕ್ತವಾಗ್ತಿವೆ. ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇದ್ರಿಂದ ಕೈ ಪಾಳಯದ ಒಳಗೆ ನಡೆಯುತ್ತಿದೆ ಮುಸುಕಿನ ಗುದ್ದಾಟ, ಮಾತಿನ ಜಟಾಪಟಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿಯ ಬಗ್ಗೆ ಶುರುವಾಗಿರುವ ಚರ್ಚೆಯಿಂದ ಸಿಎಂ ಸಿದ್ದರಾಮಯ್ಯಗೆ ಮಾತ್ರ ಟೆನ್ಷನ್ ಆಗ್ತಿಲ್ಲ. ಅವರ ಜೊತೆಗೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವ್ರಿಗೂ ತಲೆಬಿಸಿ ಶುರುವಾದಂತಿದೆ. ತನ್ನೆಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗೋ ಆತಂಕದಲ್ಲಿ ಅವರಿದ್ದ ಹಾಗಿದೆ. 

ಅಂತೂ ಭರ್ಜರಿ ಬಹುಮತ ಇದ್ದೂ ಕೂಡ, ಬಲಿಷ್ಠ ಸರ್ಕಾರ ನಡೆಸೋದೇ ಕಷ್ಟಕ್ಕೆ ಬಂದಿದೆ ಸಿದ್ದರಾಮಯ್ಯನೋರಿಗೆ.. ಮುಡಾ ಗ್ರಹಣದ ಎಫೆಕ್ಟ್ನಿಂದ ಸಿಎಂ ಪಾರಾಗೋ ಹೊತ್ತಿಗೆ ಇನ್ನೂ ಏನೇನು ಸಂಗತಿಗಳು ಘಟಿಸುತ್ತವೋ ಗೊತ್ತಿಲ್ಲ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!