ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

Published : Nov 27, 2025, 06:21 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಅರ್ಧ ಅವಧಿಯ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಬೆಂಗಳೂರು (ನ.27): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. 'ಅರ್ಧ ಅವಧಿ' ಅಧಿಕಾರದ ವದಂತಿಗಳು ಇನ್ನು ಕೇವಲ ಊಹಾಪೋಹಗಳಾಗಿ ಉಳಿದಿಲ್ಲ ಎಂಬಂತೆ ಪರಿಸ್ಥಿತಿ ಬದಲಾಗಿದೆ.

ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಅಚಲ ವಿಶ್ವಾಸದಲ್ಲಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಪಟ್ಟಕ್ಕೇರುವ ಪ್ರಬಲ ಸಂಕಲ್ಪವನ್ನು ಹೊತ್ತುಕೊಂಡು ದೆಹಲಿಯಲ್ಲಿ ಹೈಕಮಾಂಡ್‌ನ ತೀರ್ಪನ್ನು ನಿರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು (ನ.27) ನಡೆಯಲಿರುವ ಮಹತ್ವದ ಸಭೆಯಲ್ಲಿ ಕರ್ನಾಟಕದ ಈ ಸಿಂಹಾಸನ ಸಂಘರ್ಷದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಡಿ.ಕೆ. ಸಹೋದರರು ಹೈಕಮಾಂಡ್‌ಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಡೆಡ್‌ಲೈನ್‌ ನೀಡಿದ್ದಾರೆ ಎಂಬ ಮಾತುಗಳು ಹಸ್ತಪಾಳಯದಲ್ಲಿ ಕೇಳಿಬರುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯ ನಂತರ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷಗಳ ನಂತರ ಅಧಿಕಾರವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡುತ್ತಾರೆ ಎಂಬ ಮಾತುಗಳು ಬಲವಾಗಿದ್ದವು. ಈಗ ಆ ಅವಧಿ ಮುಕ್ತಾಯಗೊಂಡಿದೆ.

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more