ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟಿಂಗ್ ಬೆನ್ನಲ್ಲೇ, ಅಮೇರಿಕಾದಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಡಿಕೆಶಿ!

ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟಿಂಗ್ ಬೆನ್ನಲ್ಲೇ, ಅಮೇರಿಕಾದಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಡಿಕೆಶಿ!

Published : Sep 12, 2024, 08:30 PM IST

ರಾಜ್ಯದಲ್ಲಿ ಸಿಎಂ ಖುರ್ಚಿಗಾಗಿ ಬಡಿದಾಟ ಶುರುವಾಗಿರುವ ಬೆನ್ನಲ್ಲಿಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅಮೇರಿಕಾದಲ್ಲಿದ್ದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೇ ಇದ್ದರೂ ಸಿದ್ದರಾಮಯ್ಯ ಮಾತ್ರ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಗುಟುರು ಹಾಕಿದ್ದಾರೆ.

ರಾಜ್ಯದಲ್ಲಿ ಸಿಎಂ ಖುರ್ಚಿಗಾಗಿ ಬಡಿದಾಟ ಶುರುವಾಗಿರುವ ಬೆನ್ನಲ್ಲಿಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅಮೇರಿಕಾದಲ್ಲಿದ್ದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೇ ಇದ್ದರೂ ಸಿದ್ದರಾಮಯ್ಯ ಮಾತ್ರ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಗುಟುರು ಹಾಕಿದ್ದಾರೆ.

ಕಾಂಗ್ರೆಸ್'ನಲ್ಲಿ ನಿಲ್ಲುತ್ತಲೇ ಇಲ್ಲ ಸಿಂಹಾಸನ ಸಂಘರ್ಷ... ಸಿದ್ದರಾಮಯ್ಯ ಕುಳಿತ ಸಿಎಂ ಸಿಂಹಾಸನದ ಮೇಲೆ 93 ವರ್ಷದ ವಯೋವೃದ್ಧನ ಕಣ್ಣು ಬಿದ್ದಿದೆ. ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟ ಬೆಳಗಾವಿ ಸಾಹುಕಾರನ ಪರ ಬಿಜೆಪಿ ಶಾಸಕನ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಪಟ್ಟದ ಗುದ್ದಾಟದಲ್ಲಿ ಸಿಎಂ ಸಿದ್ದರಾಮಯ್ಯ ಗುಟುರು ಹಾಕಿದ್ದಾರೆ. ಯಾವ ಅನುಮಾನವೂ ಬೇಡ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಶತ್ರುಗಳಿಗೆ, ಪ್ರತಿಸ್ಪರ್ಧಿಗಲಿಗೆ ಖಡಕ್ ಸಂದೇಶ ಕೊಟ್ಟಿದ್ದಾರೆ. ಆದರೆ, ಕುರ್ಚಿ ಫೈಟಿಂಗ್ ಬೆನ್ನಲ್ಲಿಯೇ ದೆಹಲಿಯ ಸಹವಾಸವೇ ಬೇಡವೆಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಮೆರಿಕಾ ಪ್ರವಾಸದಲ್ಲಿದ್ದ ರಾಹುಲ್‌ಗಾಂಧಿಯನ್ನು ಅಲ್ಲಿಯೇ ಭೇಟಿ ಮಾಡಿದ್ದಾರೆ. ಈ ಮೂಲಕ ಟ್ರಬಲರ್ ಶೂಟರ್, ಸಿಂಗಾಸನಕ್ಕೇ ಶೂಟ್ ಮಾಡಿದಂತಿದೆ.

ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಎಲ್ಲ ವರ್ಗಕ್ಕೂ 3 ವರ್ಷ ವಯೋಮಿತಿ ಸಡಿಲಿಸಿದ ಸರ್ಕಾರ!

ಇನ್ನು ಸಿದ್ದರಾಮಯ್ಯ ನಿಮಗೆ ಯಾವ ಡೌಟೂ ಬೇಡ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೀತೇನೆ ಎಂದು ಹೇಳಿದ್ದಾರೆ. ಆದರೆ, ಅತ್ತ ಸಿದ್ದು ಆಪ್ತ ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಬಿಜೆಪಿ ಶಾಸಕರು ಬ್ಯಾಟ್ ಬೀಸಿದ್ದಾರೆ. ಅವರೇ ಮುಖ್ಯಮಂತ್ರಿಯಾಗಲಿ ಅಂತಿದ್ದಾರೆ. ಮುಖ್ಯಮಂತ್ರಿ ಪಟ್ಟದ ಮೇಲೆ ಹತ್ತಾರು ಕಣ್ಣು.. ಯಾರೇ ಕನಸು ಕಂಡ್ರೂ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ.. ಆದ್ರೆ ಸದ್ಯದಲ್ಲೇ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡ್ತಾರೆ ಅಂತ ಎದೆ ತಟ್ಟಿ ಹೇಳ್ತಾ ಇದ್ದಾರೆ ಕಮಲದಳ ನಾಯಕರು. ಕಾರಣ ಹೈಕೋರ್ಟ್'ನಲ್ಲಿ ನಡೀತಾ ಇರೋ ಕೇಸ್.. ಹಾಗಾದ್ರೆ ಸಿದ್ದರಾಮಯ್ಯನವರ ಪಾಲಿಗೆ ಗುರುವಾರವೇ ಡಿಸೈಡಿಂಗ್ ಡೇ ಆಗಲಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more