News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

Published : May 25, 2023, 11:37 PM IST

ಒಂದೆಡೆ ಇಡೀ ರಾಜ್ಯ ಸರ್ಕಾರ ನವದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟ ವಿಸ್ತರಣೆಯ ಸರ್ಕಸ್‌ನಲ್ಲಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಕೂಡ 'ಗ್ಯಾರಂಟಿ' ಹೋರಾಟಕ್ಕಿಳಿಯಲು ಅಣಿಯಾಗಿದೆ.
 

ಬೆಂಗಳೂರು (ಮೇ.25): ರಾಜ್ಯದಲ್ಲಿ ಗ್ಯಾರಂಟಿ ಗುದ್ದಾಟ ಜೋರಾಗಿದೆ. ಐದು ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಇನ್ನೂ ಅದನ್ನು ಜಾರಿ ಮಾಡಿಲ್ಲ. ಆದರೆ, ಜನ ಮಾತ್ರ ತಾವು ಕರೆಂಟ್‌ ಬಿಲ್‌ ಕಟ್ಟಲ್ಲ,ಬಸ್‌ ಟಿಕೆಟ್‌ ತೆಗೆದುಕೊಳ್ಳೋದಿಲ್ಲ ಎಂದು ವಾದಕ್ಕೆ ಇಳಿದಿದ್ದಾರೆ. ಇದನ್ನು ಬಿಜೆಪಿ ಹಾಗೂ ಜೆಡಿಎಸ್‌ ಅಸ್ತ್ರವಾಗಿ ಬಳಸಿಕೊಳ್ಳಲು ಸಜ್ಜಾಗಿದೆ.

ಇನ್ನೊಂದೆಡೆ ಗ್ಯಾರಂಟಿ ಬಗ್ಗೆ ನಿರ್ಧಾರ ಮಾಡಬೇಕಿದ್ದ ಇಡೀ ಸರ್ಕಾರ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಸಂಪುಟ ವಿಸ್ತರಣೆ ಮಾಡುವ ಸಲುವಾಗಿ ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿದೆ. ಮೂಲಗಳ ಪ್ರಕಾರ ಶನಿವಾರ ಸಚಿವರ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ.

Karnataka cabinet Expansion: ಕಾಂಗ್ರೆಸ್‌ನ 18 ಹೊಸ ಸಚಿವರ ಪಟ್ಟಿ ಲಭ್ಯ: ಲಿಂಗಾಯತರ ಕೈ ಹಿಡಿದ ಹೈಕಮಾಂಡ್

ಆರಂಭದಲ್ಲಿ 20 ಶಾಸಕರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದರೂ, ಕೊನೆಗೆ ಈ ಸಂಖ್ಯೆ 24ಕ್ಕೆ ಏರಿದೆ. ಈ ಕುರಿತಾಗಿ ರಾಜ್ಯಪಾಲರಿಗೂ ಮಾಹಿತಿ ನೀಡಲಾಗಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕುರಿತಾಗಿ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more