ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್‌ ಭರ್ಜರಿ ತಯಾರಿ, ಬಿಜೆಪಿ ಜೆಡಿಎಸ್‌ ಮಣಿಸಲು ಸಿದ್ದವಾಗ್ತಿದೆ ರಣತಂತ್ರ

Aug 16, 2023, 3:46 PM IST

ಕಾಂಗ್ರೆಸ್‌ ನ  ಮಹತ್ವದ ಸರ್ವ ಸದಸ್ಯರ ಸಭೆ ನಡೆದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಭೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಭೆ ಮಹತ್ವ  ಪಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ತಂತ್ರ ಹೆಣೆದಿದೆ. ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ಸಭೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯಿಲಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಚೆಲುವರಾಯ ಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಂಸದ ಚಂದ್ರಶೇಖರ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.