ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

ಕಾಂಗ್ರೆಸ್‌ ಘರ್‌ ವಾಪ್ಸಿ ಆರಂಭ: ಲೋಕಸಭೆ ಚುನಾವಣೆಗೂ ಮುನ್ನ 'ಕೈ' ಹಿಡಿಯುವರೇ ರೆಬೆಲ್‌ ಶಾಸಕರು

Published : Aug 16, 2023, 06:40 PM IST

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ.

ಬೆಂಗಳೂರು (ಆ.16): ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನವನ್ನು ಮಾಡಿದ್ದ ರೆಬೆಲ್‌ ಶಾಸಕರನ್ನು ಘರ್ ವಾಪಸಿ ಮಾಡಿಕೊಳ್ಳಲು ಕಾಂಗ್ರೆಸ್‌ ಸಿದ್ಧವಾಗಿದೆ. ಈಗ ಸದ್ಯಕ್ಕೆ ಒಬ್ಬ ಶಾಸಕರು ಮಾತ್ರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲಿದ್ದಾರೆ. ಇನ್ನು ಲೋಕಸಭಾ ಚುನಾವಣೆ ವೇಳೆ ಹಲವು ವಲಸೆ ಶಾಸಕರು ಕಾಂಗ್ರೆಸ್‌ಗೆ ವಾಪಸ್‌ ಬರಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಈಗ ದಕ್ಷಿಣ ಕರ್ನಾಟಕದ ಮೂವರು ಹಾಗೂ ಉತ್ತರ ಕರ್ನಾಟಕದ ಒಬ್ಬ ಶಾಸಕರು ಕಾಂಗ್ರೆಸ್‌ಗೆ ಮರಳಿ ಬರಲು ಸಿದ್ಧವಾಗಿದ್ದಾರೆ. ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಕೂಡವೂ ಘರ್‌ ವಾಪ್ಸಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನವನ್ನಾದರೂ ಕರ್ನಾಟಕದಲ್ಲಿ ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.  ಇನ್ನು ಸರ್ಕಾರ ಬೀಳಿಸಿದ ರೆಬೆಲ್‌ ಶಾಸಕರಾದ ರಮೇಶ್‌ ಜಾರಕಿಹೊಳಿ, ಮುನಿರತ್ನ, ಶಿವರಾಮ್‌ ಹೆಬ್ಬಾರ್, ಗೋಪಾಲಯ್ಯ, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌ ಮಾತ್ರ ಗೆದ್ದಿದ್ದಾರೆ. ಆದರೆ, ಯಾರು ಘರ್‌ ವಾಪಸ್ಸಿ ಆಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.  ಆದರೆ, ಬೆಂಗಳೂರಿನ ಒಬ್ಬ ಶಾಸಕ ಮಾತ್ರ ಮರಳಿ ಬರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 
 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more