ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

Published : Nov 08, 2022, 11:05 PM IST

ಹಿಂದು ಎನ್ನುವ ಪದ ಅಶ್ಲೀಲ, ಅದು ಪರ್ಷಿಯಾದಿಂದ ಬಂದಿದ್ದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ತಂದಿರುವ ಪಕ್ಷದ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ಹೇಳಿಕೆಯಿಂದ ಅಂತರ ಕಾಯ್ದುಕೊಂಡರೆ, ಬಿಜೆಪಿ ಇದೇ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ.

ಬೆಂಗಳೂರು (ನ.8): ಹಿಂದುಗಳ ಆಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ವಾಪಾಸ್‌ ಪಡೆಯೋದಿಲ್ಲ, ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಅದರ ಬದಲು ಮಂಗಳವಾರ ತಾವು ಹೇಳಿದ ಹೇಳಿಕೆಗೆ ಸಮರ್ಥನೆಗೆ ಮುಂದಾಗಿದ್ದಾರೆ.

ಹೇಳಿದ್ದು ತಪ್ಪು ಅಂತಾ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ನೀಡುತ್ತೇನೆ ನಾನು ನೀಡಿದ ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ.ನನ್ನ ಹೇಳಿಕೆಯಲ್ಲಿ ವಿವಾದ ಆಗುವಂತಹ ಪ್ರಶ್ನೆಯೇ ಇಲ್ಲ. ಇದು ನನ್ನ ಹೇಳಿಕೆಯಲ್ಲ ಡಿಕ್ಷನರಿಯಲ್ಲಿ ಇದೆ, ನಿಮಗೆ ಕೊಡ್ತೀನಿ. ಪುಸ್ತಕಗಳಲ್ಲೂ ಹಿಂದೂ ಪದದ ಬಗ್ಗೆ ಅರ್ಥದ ಉಲ್ಲೇಖವಿದೆ ಎಂದು ಹೇಳಿದ್ದಾರೆ.

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಈ ನಡುವೆ ಸತೀಶ್‌ ಜಾರಕಿಹೊಳಿ ಅವರ ಗುರು ಸಿದ್ಧರಾಮಯ್ಯ, ಈ ಕುರಿತಾಗಿ ರಾಜ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಅವರ ಹೇಳಿರುವ ಪ್ರತಿಕ್ರಿಯೆಯೇ ನನ್ನ ಪ್ರತಿಕ್ರಿಯೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್‌, ಬಿಕೆ ಹರಿಪ್ರಸಾದ್‌ ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಸತೀಶ್‌ ಜಾರಕಿಹೊಳಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಹೊರಹಾಕಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more