ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

Published : Nov 08, 2022, 11:05 PM IST

ಹಿಂದು ಎನ್ನುವ ಪದ ಅಶ್ಲೀಲ, ಅದು ಪರ್ಷಿಯಾದಿಂದ ಬಂದಿದ್ದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ತಂದಿರುವ ಪಕ್ಷದ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ಹೇಳಿಕೆಯಿಂದ ಅಂತರ ಕಾಯ್ದುಕೊಂಡರೆ, ಬಿಜೆಪಿ ಇದೇ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ.

ಬೆಂಗಳೂರು (ನ.8): ಹಿಂದುಗಳ ಆಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ವಾಪಾಸ್‌ ಪಡೆಯೋದಿಲ್ಲ, ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಅದರ ಬದಲು ಮಂಗಳವಾರ ತಾವು ಹೇಳಿದ ಹೇಳಿಕೆಗೆ ಸಮರ್ಥನೆಗೆ ಮುಂದಾಗಿದ್ದಾರೆ.

ಹೇಳಿದ್ದು ತಪ್ಪು ಅಂತಾ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ನೀಡುತ್ತೇನೆ ನಾನು ನೀಡಿದ ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ.ನನ್ನ ಹೇಳಿಕೆಯಲ್ಲಿ ವಿವಾದ ಆಗುವಂತಹ ಪ್ರಶ್ನೆಯೇ ಇಲ್ಲ. ಇದು ನನ್ನ ಹೇಳಿಕೆಯಲ್ಲ ಡಿಕ್ಷನರಿಯಲ್ಲಿ ಇದೆ, ನಿಮಗೆ ಕೊಡ್ತೀನಿ. ಪುಸ್ತಕಗಳಲ್ಲೂ ಹಿಂದೂ ಪದದ ಬಗ್ಗೆ ಅರ್ಥದ ಉಲ್ಲೇಖವಿದೆ ಎಂದು ಹೇಳಿದ್ದಾರೆ.

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಈ ನಡುವೆ ಸತೀಶ್‌ ಜಾರಕಿಹೊಳಿ ಅವರ ಗುರು ಸಿದ್ಧರಾಮಯ್ಯ, ಈ ಕುರಿತಾಗಿ ರಾಜ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಅವರ ಹೇಳಿರುವ ಪ್ರತಿಕ್ರಿಯೆಯೇ ನನ್ನ ಪ್ರತಿಕ್ರಿಯೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್‌, ಬಿಕೆ ಹರಿಪ್ರಸಾದ್‌ ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಸತೀಶ್‌ ಜಾರಕಿಹೊಳಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಹೊರಹಾಕಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more