ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

Published : Nov 08, 2022, 11:05 PM IST

ಹಿಂದು ಎನ್ನುವ ಪದ ಅಶ್ಲೀಲ, ಅದು ಪರ್ಷಿಯಾದಿಂದ ಬಂದಿದ್ದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ತಂದಿರುವ ಪಕ್ಷದ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ಹೇಳಿಕೆಯಿಂದ ಅಂತರ ಕಾಯ್ದುಕೊಂಡರೆ, ಬಿಜೆಪಿ ಇದೇ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ.

ಬೆಂಗಳೂರು (ನ.8): ಹಿಂದುಗಳ ಆಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ವಾಪಾಸ್‌ ಪಡೆಯೋದಿಲ್ಲ, ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಅದರ ಬದಲು ಮಂಗಳವಾರ ತಾವು ಹೇಳಿದ ಹೇಳಿಕೆಗೆ ಸಮರ್ಥನೆಗೆ ಮುಂದಾಗಿದ್ದಾರೆ.

ಹೇಳಿದ್ದು ತಪ್ಪು ಅಂತಾ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ನೀಡುತ್ತೇನೆ ನಾನು ನೀಡಿದ ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ.ನನ್ನ ಹೇಳಿಕೆಯಲ್ಲಿ ವಿವಾದ ಆಗುವಂತಹ ಪ್ರಶ್ನೆಯೇ ಇಲ್ಲ. ಇದು ನನ್ನ ಹೇಳಿಕೆಯಲ್ಲ ಡಿಕ್ಷನರಿಯಲ್ಲಿ ಇದೆ, ನಿಮಗೆ ಕೊಡ್ತೀನಿ. ಪುಸ್ತಕಗಳಲ್ಲೂ ಹಿಂದೂ ಪದದ ಬಗ್ಗೆ ಅರ್ಥದ ಉಲ್ಲೇಖವಿದೆ ಎಂದು ಹೇಳಿದ್ದಾರೆ.

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಈ ನಡುವೆ ಸತೀಶ್‌ ಜಾರಕಿಹೊಳಿ ಅವರ ಗುರು ಸಿದ್ಧರಾಮಯ್ಯ, ಈ ಕುರಿತಾಗಿ ರಾಜ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಅವರ ಹೇಳಿರುವ ಪ್ರತಿಕ್ರಿಯೆಯೇ ನನ್ನ ಪ್ರತಿಕ್ರಿಯೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್‌, ಬಿಕೆ ಹರಿಪ್ರಸಾದ್‌ ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಸತೀಶ್‌ ಜಾರಕಿಹೊಳಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಹೊರಹಾಕಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more