Karnataka election:ಬೆಳಗಾವಿಯಲ್ಲಿ ಹಾಲಿ, ಮಾಜಿ ಸಿಎಂ ಮುಖಾಮುಖಿ

Karnataka election:ಬೆಳಗಾವಿಯಲ್ಲಿ ಹಾಲಿ, ಮಾಜಿ ಸಿಎಂ ಮುಖಾಮುಖಿ

Published : Apr 26, 2023, 05:00 PM IST

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಪರಸ್ಪರ ಭೇಟಿಯಾದರು.

ಬೆಳಗಾವಿ (ಏ.26): ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಪರಸ್ಪರ ಭೇಟಿಯಾದರು. ಈ ವೇಳೆ ಇಬ್ಬರೂ ನಗು ನಗುತ್ತಲೇ ಹಸ್ತಲಾಘವ ಮಾಡಿಕೊಂಡು ಕುಶಲೋಪರಿಯನ್ನು ವಿಚಾರಿಸಿಕೊಂಡರು. ನಂತರ, ಚುನಾವಣಾ ಪ್ರಚಾರ ಕಾರ್ಯಗಳ ಬಗ್ಗೆ ವಿಚಾರಣೆ ಮಾಡಿಕೊಳ್ಳುತ್ತಾ, ಮುಂದೆ ತಾವು ಪ್ರಚಾರ ಕಾರ್ಯಕ್ಕೆ ಹೋಗುವ ವಿವರವನ್ನು ಪಡೆದರು. ಇನ್ನು ಬಸವರಾಜ ಬೊಮ್ಮಾಯಿ ಅವರು ಹೊರಡುವಾಗ ಅವರಿಗೆ ಸಿದ್ದರಾಮಯ್ಯ ಅವರು ಬೆನ್ನು ತಟ್ಟಿ ಕಳುಹಿಸಿಕೊಟ್ಟರು. ಇದೇ ವೇಳೆ ಸಿದ್ದರಾಮಯ್ಯ ಅವರ ಸ್ವಲ್ಪ ದೂರದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂಡ ಆಗಮಿಸಿದರು. 

ಮಾಜಿ ಸಿಎಂ ಸಿದ್ದರಾಮಯಯ ಅವರು ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಎಂದು ಹೇಳಿಕೆ ನೀಡಿರುವುದು ರಾಜ್ಯಾದ್ಯಂತ ವಿವಾದವನ್ನು ಸೃಷ್ಟಿಸಿದೆ. ಇದಕ್ಕೆ ಸ್ಪಷ್ಟೀಕರಣ ಕೊಡುವ ನಿಟ್ಟಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಹೇಳಿರುವುದಾಗಿ ತಿಳಿಸಿದ್ದರು. ಆದರೆ, ಈಗ  ಭ್ರಷ್ಟ ಸಿಎಂ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಆರೋಪಕ್ಕೆ ಗುರಿಯಾದ ಸಿಎಂ ಬಸವರಾಜ ಬೊಮ್ಮಾಯಿ ಒಂದೇ ಕಡೆ ಭೇಟಿಯಾಗಿ ಕುಶಲೋಪರಿ ವಿಚಾರಣೆ ಮಾಡಿದ್ದು, ರಾಜಕಾರಣದಲ್ಲಿ ಕೌತುಕ ಮೂಡಿಸಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more