2025ರಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ನನಸಾಗುತ್ತಾ?

2025ರಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ನನಸಾಗುತ್ತಾ?

Published : Dec 31, 2024, 11:08 PM IST

2025ರಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ. ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸು ನನಸಾಗುವ ಸಾಧ್ಯತೆಗಳ ಬಗ್ಗೆ ಚರ್ಚೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಕಳೆದ ವರ್ಷ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಅಂತರ್ಯುದ್ಧ ಶುರುವಾದಾಗ ದೆಹಲಿಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ರಹಸ್ಯ ಸಭೆಯೊಂದು ನಡೆದಿತ್ತು. ಆ ಸಭೆಯಲ್ಲಿದ್ದವರು ಐದೇ ಐದು ಮಂದಿ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್. ಈ ಐದು ಮಂದಿ ಇದ್ದ ಸಭೆಯಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿದೆ ಅಂತ ಡಿಕೆ ಶಿವಕುಮಾರ್ ಅವ್ರ ಬಣದವರು ಹೇಳ್ತಾರೆ. ಒಪ್ಪಂದ ಏನಂದ್ರೆ, ಎರಡೂವರೆ ವರ್ಷಗಳ ನಂತ್ರ ಮುಖ್ಯಮಂತ್ರಿ ಕುರ್ಚಿಯನ್ನು ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವ್ರಿಗೆ ಬಿಟ್ಟು ಕೊಡ್ಬೇಕು ಅನ್ನೋದು. ಹಾಗಾದ್ರೆ ಡಿಕೆ ಶಿವಕುಮಾರ್ ಅವ್ರ ರಾಜಕೀಯ ಜೀವನದ ಅತೀ ದೊಡ್ಡ ಕನಸು 2025ರಲ್ಲಿ ಈಡೇರುತ್ತಾ..? ಎಂಬುದನ್ನು ಕಾದು ನೋಡಬೇಕಿದೆ..

ರಾಜ್ಯದ ಇಬ್ಬರು ದೊಡ್ಡ ನಾಯಕರ ಪಾಲಿಗೆ 2025 ತುಂಬಾನೇ ಮಹತ್ವದ ವರ್ಷ. ಒಬ್ರು ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ನೊಬ್ರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಡಿಕೆಶಿ ಅವ್ರ ಅತೀ ದೊಡ್ಡ ರಾಜಕೀಯ ಮಹತ್ವಾಕಾಂಕ್ಷೆ 2025ರಲ್ಲಿ ಈಡೇರುತ್ತಾ..? ಅದನ್ನು ಈಡೇರಿಸಿಕೊಳ್ಳೋದಕ್ಕೆ ತೆರೆಮರೆಯಲ್ಲಿ ಸಿದ್ಧತೆಗಳಂತೂ ನಡೀತಾ ಇವೆ. ಮತ್ತೊಂದ್ಕಡೆ ಅಗ್ನಿಪಂಜರದಲ್ಲಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ. ಒಂದ್ಕಡೆ ಅಗ್ನಿಪಂಜರ, ಮತ್ತೊಂದ್ಕಡೆ ಅದೊಂದು ಚಾಲೆಂಜ್.. 2025ರಲ್ಲಿ ಸಿದ್ದರಾಮಯ್ಯನವರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗಲಿದೆ.. 
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more