ಕಮಲ ಮುಡಿದ ಅನರ್ಹರು: 15 ಕಡೆ ಗೆಲುವಿನ ವಿಶ್ವಾಸದಲ್ಲಿ ನಳೀನ್ ಕುಮಾರ್

Nov 14, 2019, 3:57 PM IST

ಬೆಂಗಳೂರು (ನ.14): ಕಾಂಗ್ರೆಸ್, ಜೆಡಿಎಸ್ ತೊರೆದು ಅನರ್ಹತೆಗೆ ಗುರಿಯಾಗಿದ್ದ 15 ಶಾಸಕರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಅವರನ್ನು ಬರಮಾಡಿಕೊಂಡ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಂದಿನ ಉಪಚುನಾವಣೆಯಲ್ಲಿ ಎಲ್ಲರನ್ನೂ ಗೆಲ್ಲಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಶಿವಾಜಿನಗರ ಅನರ್ಹ ಶಾಸಕ ರೋಷನ್ ಬೇಗ್ ಹೊರತುಪಡಿಸಿ ಉಳಿದೆಲ್ಲಾ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. 

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.