Karnataka Election 2023: ಮತಗಟ್ಟೆ ಎದುರು ಧರಣಿ ಕುಳಿತ ಅಜ್ಜಿ: ತೋರಿಸಿದ ಚಿಹ್ನೆ ಮತ ಹಾಕಿಲ್ಲ ಎಂದ ಆರೋಪ

Karnataka Election 2023: ಮತಗಟ್ಟೆ ಎದುರು ಧರಣಿ ಕುಳಿತ ಅಜ್ಜಿ: ತೋರಿಸಿದ ಚಿಹ್ನೆ ಮತ ಹಾಕಿಲ್ಲ ಎಂದ ಆರೋಪ

Published : May 10, 2023, 03:01 PM IST

ಮತದಾನ ಮಾಡಲು ಬಂದಿದ್ದ ಅಜ್ಜಿಯೊಬ್ಬಳು ಮತಗಟ್ಟೆಯ ಮುಂದೆ ಧರಣಿ ಕುಳಿತ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ 53ರಲ್ಲಿ ನಡೆದಿದೆ. 85 ವರ್ಷದ ಮುಕ್ತುಂಬೀ ದೊಡ್ಡಮನಿ ಹೆಸರಿನ ಅಜ್ಜಿ ಮತ ಚಲಾಯಿಸಲು ತನ್ನ ಮೊಮ್ಮಗನ ಜೊತೆಗೆ ಮತಗಟ್ಟೆಗೆ ಆಗಮಿಸಿದ್ದರು. 

ಗದಗ (ಮೇ.10): ಮತದಾನ ಮಾಡಲು ಬಂದಿದ್ದ ಅಜ್ಜಿಯೊಬ್ಬಳು ಮತಗಟ್ಟೆಯ ಮುಂದೆ ಧರಣಿ ಕುಳಿತ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ 53ರಲ್ಲಿ ನಡೆದಿದೆ. 85 ವರ್ಷದ ಮುಕ್ತುಂಬೀ ದೊಡ್ಡಮನಿ ಹೆಸರಿನ ಅಜ್ಜಿ ಮತ ಚಲಾಯಿಸಲು ತನ್ನ ಮೊಮ್ಮಗನ ಜೊತೆಗೆ ಮತಗಟ್ಟೆಗೆ ಆಗಮಿಸಿದ್ದರು. ಆದರೆ, ಚುನಾವಣಾ ಅಧಿಕಾರಿಗಳು ಮೊಮ್ಮಗನನ್ನು ಅಜ್ಜಿಯ ಜೊತೆಗೆ ಬಿಡಲಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ಅಜ್ಜಿ ತೋರಿಸಿದ ಚಿಹ್ನೆಗೆ ಮತ ಹಾಕದೆ ಬೇರೆ ಗುರುತಿಗೆ ಅಧಿಕಾರಿಗಳು ಮತಹಾಕಿಸಿದ್ದಾರೆ ಎಂದು ಅಜ್ಜಿ ಗಂಭೀರ ಆರೋಪ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ತಹಸೀಲ್ದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಬರುವಂತೆ ಅಜ್ಜಿ ಪಟ್ಟು ಹಿಡಿದಿದ್ದಾರೆ. ಮತಗಟ್ಟೆಯ ಮುಂದೆಯೇ ಅಜ್ಜಿ ಧರಣಿ ಕುಳಿತಿದಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಇಂದು (ಮೇ.10) ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more