ಕಲಘಟಗಿ ಕ್ಷೇತ್ರದಲ್ಲಿ ನಾಗರಾಜ್ ಛಬ್ಬಿ v/s ಸಂತೋಷ್ ಲಾಡ್ ..ಈ ಬಾರಿ ಯಾರಿಗೆ ಜೈ ಅಂತಾನೆ ಮತದಾರ..?

Apr 28, 2023, 10:32 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,ಕಲಘಟಗಿ  ಕ್ಷೇತ್ರದ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಕಲಘಟಗಿ ಕ್ಷೇತ್ರದಲ್ಲಿ ನಾಗರಾಜ್ ಛಬ್ಬಿ ಬರಬೇಕು, ಅವರು ಸ್ಥಳಿಯರು. ಅವರಿಂದ ಅಭಿವೃದ್ದಿಯಾಗುತ್ತದೆ ಎನ್ನುವ ಭರವಸೆಯಲ್ಲಿ ಇದ್ದೇವೆ ಎಂದು ತಿಳಿಸಿದರು. ಇನ್ನು  ಸಂತೋಷ್ ಲಾಡ್ ಸೋತರು ಕೈಬಿಟ್ಟಿಲ್ಲ ಕ್ಷೇತ್ರವನ್ನು , ಶಿಕ್ಷಣ ವ್ಯವಸ್ಥೆ, ಧಾರ್ಮಿಕ ವ್ಯವಸ್ಥೆತನ್ನು ಮಾಡಿದ್ದಾರೆ  ಸಂತೋಷ್ ಲಾಡ್ ಫೌಂಡೇಶನ್  ವತಿಯಿಂದ ಒಳ್ಳೆ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.