ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more