ವರುಣಾ: ಮತಗಟ್ಟೆ ಬಳಿ ಸೋಮಣ್ಣ ತೆರಳದಂತೆ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ...

May 10, 2023, 4:39 PM IST

ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ವರುಣದಲ್ಲಿ  ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.ವರುಣಾ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣರನ್ನು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿದ ಘಟನೆ  ವರುಣಾದಲ್ಲಿ ನಡೆದಿದೆ.  ವಿ ಸೋಮಣ್ಣ ಮತಗಟ್ಟೆ ಬಳಿ ತೆರಳಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿದ್ದರು. ಇತ್ತ ಬೂತ್‌ಗೆ ತೆರಳಲೇ ಬೇಕೆಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ನಂತರ ಅಧಿಕಾರಿಗಳಿಗೆ ಕರೆ ಮಾಡಿದ ವಿ.ಸೋಮಣ್ಣ  ಗಮನಕ್ಕೆ ತಂದರು.