ಬೆಂಗಳೂರಲ್ಲಿ ಮೋದಿ ಮೆಗಾ ರೋಡ್‌ ಶೋ ಸಮಯ ಬದಲಾವಣೆ: ಎರಡು ದಿನ ಪ್ರಚಾರ!

ಬೆಂಗಳೂರಲ್ಲಿ ಮೋದಿ ಮೆಗಾ ರೋಡ್‌ ಶೋ ಸಮಯ ಬದಲಾವಣೆ: ಎರಡು ದಿನ ಪ್ರಚಾರ!

Published : May 04, 2023, 05:37 PM IST

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ 2 ದಿನ ರೋಡ್‌ ಶೋ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು (ಮೇ.04): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 6ರಂದು ಬೆಂಗಳೂರು ನಗರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಟ್ಟು 37 ಕಿ.ಮೀ ರೋಡ್‌ ಶೋ ನಡೆಸಲು ಮುಂದಾಗಿದ್ದರು. ಆದರೆ, ರೋಡ್‌ ಶೋ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಮೇ6 ಮತ್ತು ಮೇ 7ರಂದು ಎರಡು ದಿನಗಳ ಅವಧಿಯಲ್ಲಿ ರೋಡ್‌ ಶೋ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿ ಭರ್ಜರಿ ರೋಡ್‌ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. 

ಇನ್ನು ಸಭೆಯನ್ನು ಮುಗಿಸಿದ ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು, ಮೆ 6 ಮತ್ತು 7 ರಂದು ಬೆಂಗಳೂರಲ್ಲಿ ರೋಡ್ ಶೋ ಮಾಡಲಿದ್ದಾರೆ. ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೇ ಇತ್ತು, ಮೋದಿಯವರಿಗೂ ವಿನಂತಿ ಕೂಡ ಮಾಡಿದ್ದೆವು. ಆದರೆ ನಾನು ಬರೋದ್ರಿಂದ ಟ್ರಾಫಿಕ್ ಜಾಮ್ ಆಗಬಾರದು ಯಾವುದಕ್ಕಾದರೂ ಒಂದಕ್ಕೆ ಬರ್ತೇನೆ ಎಂದಿದ್ದರು. ಆದರೆ ಈಗ ಎರಡು ಕಡೆಗಳಲ್ಲಿ ರೋಡ್ ಶೋಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ, ಮೇ 6 ರಂದು 10 ಕಿ.ಮಿ. ಮತ್ತು 7 ರಂದು 26 ಕಿಮಿ ರೋಡ್ ಶೋ ಮಾಡುತ್ತಾರೆ. ಬೆಂಗಳೂರಿನ ಬೀದಿಯಲ್ಲಿ ನರೇಂದ್ರ ಮೋದಿ ಅವರು ಸಂಚಾರ ಮಾಡಲಿದ್ದಾರೆ. ಸುಮಾರು 10 ಲಕ್ಷ ಜನರು ಮೋದಿ ಅವರನ್ನು ನೋಡೋಕೆ ಬರ್ತಾರೆ ಅನ್ನೋ ನಿರೀಕ್ಷೆ ಇದೆ ಎಂದು ಹೇಳಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more