ಬೆಂಗಳೂರಲ್ಲಿ ಮೋದಿ ಮೆಗಾ ರೋಡ್‌ ಶೋ ಸಮಯ ಬದಲಾವಣೆ: ಎರಡು ದಿನ ಪ್ರಚಾರ!

ಬೆಂಗಳೂರಲ್ಲಿ ಮೋದಿ ಮೆಗಾ ರೋಡ್‌ ಶೋ ಸಮಯ ಬದಲಾವಣೆ: ಎರಡು ದಿನ ಪ್ರಚಾರ!

Published : May 04, 2023, 05:37 PM IST

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ 2 ದಿನ ರೋಡ್‌ ಶೋ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು (ಮೇ.04): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 6ರಂದು ಬೆಂಗಳೂರು ನಗರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಟ್ಟು 37 ಕಿ.ಮೀ ರೋಡ್‌ ಶೋ ನಡೆಸಲು ಮುಂದಾಗಿದ್ದರು. ಆದರೆ, ರೋಡ್‌ ಶೋ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಮೇ6 ಮತ್ತು ಮೇ 7ರಂದು ಎರಡು ದಿನಗಳ ಅವಧಿಯಲ್ಲಿ ರೋಡ್‌ ಶೋ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿ ಭರ್ಜರಿ ರೋಡ್‌ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. 

ಇನ್ನು ಸಭೆಯನ್ನು ಮುಗಿಸಿದ ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು, ಮೆ 6 ಮತ್ತು 7 ರಂದು ಬೆಂಗಳೂರಲ್ಲಿ ರೋಡ್ ಶೋ ಮಾಡಲಿದ್ದಾರೆ. ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೇ ಇತ್ತು, ಮೋದಿಯವರಿಗೂ ವಿನಂತಿ ಕೂಡ ಮಾಡಿದ್ದೆವು. ಆದರೆ ನಾನು ಬರೋದ್ರಿಂದ ಟ್ರಾಫಿಕ್ ಜಾಮ್ ಆಗಬಾರದು ಯಾವುದಕ್ಕಾದರೂ ಒಂದಕ್ಕೆ ಬರ್ತೇನೆ ಎಂದಿದ್ದರು. ಆದರೆ ಈಗ ಎರಡು ಕಡೆಗಳಲ್ಲಿ ರೋಡ್ ಶೋಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ, ಮೇ 6 ರಂದು 10 ಕಿ.ಮಿ. ಮತ್ತು 7 ರಂದು 26 ಕಿಮಿ ರೋಡ್ ಶೋ ಮಾಡುತ್ತಾರೆ. ಬೆಂಗಳೂರಿನ ಬೀದಿಯಲ್ಲಿ ನರೇಂದ್ರ ಮೋದಿ ಅವರು ಸಂಚಾರ ಮಾಡಲಿದ್ದಾರೆ. ಸುಮಾರು 10 ಲಕ್ಷ ಜನರು ಮೋದಿ ಅವರನ್ನು ನೋಡೋಕೆ ಬರ್ತಾರೆ ಅನ್ನೋ ನಿರೀಕ್ಷೆ ಇದೆ ಎಂದು ಹೇಳಿದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more