ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

Published : May 12, 2023, 10:58 PM IST

ಮೈತ್ರಿಗೆ 9 ಷರತ್ತು ಹಾಕಿದ ಹೆಚ್‌ಡಿ ಕುಮಾರಸ್ವಾಮಿ,  ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ, ನಾಳೆ ಚುನಾವಣಾ ಫಲಿತಾಂಶ ಪ್ರಕಟ, ಯಾರಿಗೆ ಅಧಿಕಾರ? ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಅತಂತ್ರ ಅನ್ನೋ ಸೂಚನೆ ಸಿಗುತ್ತಿದೆ. ಇದರ ಬೆನ್ನಲ್ಲೇ ಮೈತ್ರಿ ಮಾತು ಜೋರಾಗುತ್ತಿದೆ. ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ್ದ ಕುಮಾರಸ್ವಾಮಿ, ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಂಪೂರ್ಣ ಸ್ವಾತಂತ್ರವಿರಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಮೊದಲ ಕಂಡೀಷನ್ ಹಾಕಿದ್ದಾರೆ. ಈ ಮೂಲಕ ನಾನೇ ಸಿಎಂ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜೊತೆಗೆ ಇನ್ನೂ 9 ಕಂಡೀಷನ್ ಹಾಕಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಮತ ಎಣಿಕೆಯಲ್ಲಿ ಲೀಡ್ ಬರುತ್ತಿದ್ದಂತೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ತಾವು ಹೇಳಿದ ಸ್ಥಳಕ್ಕೆ ಬಂದು ಸೇರಲು ಸೂಚಿಸಲಾಗಿದೆ. ಪಕ್ಷದ ಗೆಲುವಿನ ಅಭ್ಯರ್ಥಿಗಳನ್ನು ಯಾರು ಸೆಳೆಯದಂತೆ ನೋಡಿಕೊಳ್ಳಲು ಪ್ಲಾನ್ ಮಾಡಲಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?