Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Published : May 15, 2023, 08:59 PM IST

ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ.

ಬೆಂಗಳೂರು (ಮೇ.15): ಮುಖ್ಯಮಂತ್ರಿ ಕುರ್ಚಿಗಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೆ ಡಿಸಿಎಂ ಸ್ಥಾನಕ್ಕೆ ಕೂಡ ಪಟ್ಟು  ಶುರುವಾಗಿದೆ. ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  ಮುಸ್ಲಿಂ ಸಮುದಾಯಕ್ಕೆ ಭಾರೀ ಅನ್ಯಾಯವಾಗ್ತಿದೆ, ಡಿಸಿಎಂ ಸ್ಥಾನ ಕೊಡಿ ಎಂದು ಮುಸ್ಲಿಂ ಧರ್ಮಗುರುಗಳು ಪಟ್ಟು ಹಿಡಿದಿದ್ದಾರೆ. 1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ. ಏಷ್ಯಾನೆಟ್ ಸುವರ್ಣನ್ಯೂಸ್ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸಫಿ ಶಾ ಅದಿ ಹೇಳಿಕೆ ನೀಡಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸಲ್ಮಾನರೇ ಪ್ರಮುಖ ಕಾರಣ. ಎಸ್ ಸಿ ಎಸ್ಟಿಗಳನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನಸಂಖ್ಯೆ ಹೊಂದಿರೋದು ಮುಸ್ಲಿಂ‌ ಸಮುದಾಯ. ಅವರ ಲೆಕ್ಕಾರದ ಪ್ರಕಾರ 80ಲಕ್ಷ 16% ಮುಸಲ್ಮಾನರಿದ್ದೇವೆ. ನಮ್ಮ ಲೆಕ್ಕಾಚಾರದ ಪ್ರಕಾರ 95ರಿಂದ 1ಕೋಟಿ ಜನರಿದ್ದೇವೆ. ಅಧಿಕೃತ ಲೆಕ್ಕಾಚಾರದ ಪ್ರಕಾರ ಲಿಂಗಾಯತ ಹಾಗೂ ಒಕ್ಕಲಿಗರಿಗಿಂತ ಮೂರು ಪಟ್ಟು ಹೆಚ್ಚು ಜನಸಂಖ್ಯೆ ನಮ್ಮಲ್ಲಿದೆ. ಆದ್ರೂ ರಾಜ್ಯದಲ್ಲಿ ಇದುವರೆಗೂ ಸಿಎಂ ಡಿಸಿಎಂ ಆಗಿಲ್ಲ ಅನ್ನೋದು ಬೇಸರದ ಸಂಗತಿ. 88% ಮತ ಹಾಕಿದ್ದೇ ಮುಸಲ್ಮಾನರು, ಕುರುಬ, ಒಕ್ಕಲಿಗ ಸಮುದಾಯದವ್ರು ಶೇಕಡಾವಾರು ಮತದಾನ ಹರಿದು ಹಂಚಿಹೋಗಿದೆ. 4% ಮೀಸಲಾತಿಯನ್ನು ನೀಡುವ ಭರವಸೆ ಕಾಂಗ್ರೆಸ್ ಭರವಸೆ ನೀಡಿತ್ತು. ಭರವಸೆ ಈಡೇರಿಸ್ತಾರೆ ಅನ್ನೋ ನಂಬಿಕೆ ಇದೆ ಎಂದಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more